ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಯಾವುದೇ ಶಾಂತಿ ಕದಡುವ ವಿಚಾರಗಳನ್ನು ಮಾತನಾಡದೇ ನಮಗೆ ನಾವೇ ನಿಯಂತ್ರಣ ಹಾಕಿಕೊಳ್ಳೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
‘ಶಾಲೆಗಳಲ್ಲಿ ಸಮವಸ್ತ್ರದ ಬಗ್ಗೆ ಮುಖ್ಯನ್ಯಾಯಮೂರ್ತಿಗಳ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆಯಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹೊರಗಿನವರು ಪ್ರಚೋದನೆ ನೀಡಿದರೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಡೆದುಕೊಳ್ಳುವುದು ಎಲ್ಲಾ ಸಂಘಟನೆಗಳ ಕರ್ತವ್ಯ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಕಾಯೋಣ. ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯದ ತೀರ್ಪಿಗೆ ನಾವೆಲ್ಲರೂ ಗೌರವಕೊಡಬೇಕು. ಶಾಂತಿಯುತ ವಾತಾವರಣ ನೆಲೆಸಬೇಕು. ಸಮಸ್ಯೆಗೆ ನ್ಯಾಯಾಲಯದಲ್ಲಿ ಪರಿಹಾರ ಸಿಗಲು ಸಾಧ್ಯವಿದೆ. ನೀಡಬೇಕಿರುವ ಹೇಳಿಕೆಗಳನ್ನು ಎಲ್ಲರೂ ಈಗಾಗಲೇ ನೀಡಿದ್ದಾರೆ. ಕೋರ್ಟಿನ ತೀರ್ಪಿಗೆ ಕಾಯೋಣ’ ಎಂದು ಮನವಿ ಮಾಡಿದರು.
ಮಕ್ಕಳ ವಿಚಾರದಲ್ಲಿ ಸಂವೇದನಾಶೀಲರಾಗಿರಬೇಕು ಎಂದ ಸಿಎಂ, ಎರಡೂ ಕಡೆ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿವೆ. ಮಕ್ಕಳ ವಿಚಾರದಲ್ಲಿ ಸಂವೇದನಾಶೀಲರಾಗಿರಬೇಕು. ನ್ಯಾಯಾಲಯದಲ್ಲಿರುವುದರಿಂದ ಅದರ ತೀರ್ಪಿಗೆ ಬದ್ದರಾಗೋಣ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.