ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪತ್ರಕರ್ತೆ ರಾಣಾ ಆಯೂಬ್ ಅವರ 1.77 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ. ಸಾರ್ವಜನಿಕ ದಾನಿಗಳಿಂದ ಸಂಗ್ರಹಿಸಲಾದ ದತ್ತಿ ನಿಧಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈಕೆಯ ವಿರುದ್ಧ ತನಿಖೆ ನಡೆಯುತ್ತಿದೆ.
ಗಾಜಿಯಾಬಾದ್ ಪೊಲೀಸರ ಸೆಪ್ಟೆಂಬರ್ 2021 ರ ಎಫ್ಐಆರ್ ಅನ್ನು ಗಮನದಲ್ಲಿಟ್ಟುಕೊಂಡು ಆಯೂಬ್ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಲಾಗಿದೆ. ಆನ್ಲೈನ್ ಕ್ರೌಡ್ಫಂಡಿಂಗ್ ಪ್ಲಾಟ್ಫಾರ್ಮ್ ಕೆಟ್ಟೊ ಮೂಲಕ ಆಕೆ ಸಂಗ್ರಹಿಸಿದ 2.69 ಕೋಟಿ ರೂಪಾಯಿಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪ ಇದೆ.
ಕೆಟ್ಟೋದಲ್ಲಿ ಸಂಗ್ರಹಿಸಲಾದ ಹಣವನ್ನು ರಾಣಾ ಅಯೂಬ್ ಸಹೋದರಿ ಮತ್ತು ತಂದೆಯ ಬ್ಯಾಂಕ್ ಖಾತೆಗಳಿಂದ ಹಿಂತೆಗೆದುಕೊಳ್ಳಲಾಗಿದೆ ಎಂದು ಏಜೆನ್ಸಿ ಮೂಲಗಳು ತಿಳಿಸಿವೆ. ನಂತರ ಈ ಎಲ್ಲಾ ಹಣವನ್ನು ಆಯೂಬ್ ಅವರ ಸ್ವಂತ ಖಾತೆಗೆ ವರ್ಗಾಯಿಸಲಾಗಿದೆ.
ಪರಿಹಾರ ಕಾರ್ಯದ ವೆಚ್ಚವನ್ನು ಪಡೆಯಲು ಕೆಲವು ಘಟಕಗಳ ಹೆಸರಿನಲ್ಲಿ ನಕಲಿ ಬಿಲ್ಗಳನ್ನು ರಾಣಾ ಅಯ್ಯೂಬ್ ಸಿದ್ಧಪಡಿಸಿರುವುದು ಕಂಡುಬಂದಿದೆ ಮತ್ತು ವೈಯಕ್ತಿಕ ವಿಮಾನಯಾನಕ್ಕೆ ಮಾಡಿದ ವೆಚ್ಚವನ್ನು ಪರಿಹಾರ ಕಾರ್ಯದ ವೆಚ್ಚವೆಂದು ಹೇಳಲಾಗಿದೆ.
ಸಂಪೂರ್ಣ ಪೂರ್ವ ಯೋಜಿತ ಮತ್ತು ವ್ಯವಸ್ಥಿತ ರೀತಿಯಲ್ಲಿ ಚಾರಿಟಿ ಹೆಸರಿನಲ್ಲಿ ಹಣವನ್ನು ಸಂಗ್ರಹಿಸಲಾಗಿದೆ ಮತ್ತು ಯಾವ ಉದ್ದೇಶಕ್ಕಾಗಿ ಹಣವನ್ನು ಸಂಗ್ರಹ ಮಾಡಲಾಗಿತ್ತೋ ಆ ಉದ್ದೇಶಕ್ಕೆ ಹಣವನ್ನು ಸಂಪೂರ್ಣವಾಗಿ ಬಳಸಲಾಗಿಲ್ಲ ಎಂದು ಇಡಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.