ನವದೆಹಲಿ: ಆಧುನಿಕ ಮತ್ತು ದೂರದೃಷ್ಟಿಯಿಲ್ಲದ ಪೊಲೀಸ್ ಪಡೆ ಇಲ್ಲದೆ ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡುವ ಸರಕಾರದ ಗುರಿಯನ್ನು ನನಸಾಗಿಸಲು ಸಾಧ್ಯವಿಲ್ಲ ಎಂದು ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಗುರುವಾರ ಹೇಳಿದ್ದಾರೆ.
ದೆಹಲಿ ಪೊಲೀಸರ ಪ್ಲಾಟಿನಂ ಜುಬ್ಲಿ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಸರ್ಕಾರವು ಭಾರತವನ್ನು ಉತ್ಪಾದನಾ ಕೇಂದ್ರವನ್ನಾಗಿ ಮಾಡಲು, ಆಕಾಂಕ್ಷೆಯ ಭಾರತವನ್ನು ನಿರ್ಮಾಣ ಮಾಡಲು, ಆರ್ಥಿಕತೆಯು ಬೆಳವಣಿಗೆ ಮತ್ತು ವಿತರಣೆಯ ಎಲ್ಲಾ ದಾಖಲೆಗಳನ್ನು ಮೀರಲು ಆಧುನಿಕ ಮತ್ತು ದೂರದೃಷ್ಟಿ ಹೊಂದಿರುವ ಪೊಲೀಸ್ ಪಡೆ ಬೇಕೇ ಬೇಕು ಎಂದು ಅವರು ಹೇಳಿದ್ದಾರೆ.
ದೆಹಲಿ ಪೊಲೀಸರು ಈಗಾಗಲೇ ಭದ್ರತೆ, ಅಪರಾಧ ನಿಯಂತ್ರಣ ಮತ್ತು ಭಯೋತ್ಪಾದನೆ ವಿರುದ್ಧ ಹೋರಾಡುವ ಸಾಮರ್ಥ್ಯದೊಂದಿಗೆ ಒಂದು ದಕ್ಷ ಸಂಘಟನೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ, ಜೊತೆಗೆ ಅನುಕರಣೀಯ ಮಾನವೀಯತೆ ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.
ಕ್ರಿಯಾತ್ಮಕವಾಗಿ ಬದಲಾಗುತ್ತಿರುವ ತಾಂತ್ರಿಕ ಮತ್ತು ಭದ್ರತಾ ಪರಿಸರದಲ್ಲಿ ಅದರ ಚುರುಕುತನ ಮತ್ತು ಹೊಂದಿಕೊಳ್ಳುವಿಕೆಯಲ್ಲಿ ಇದರ ಯಶಸ್ಸು ಅಡಗಿದೆ. ಇಂದಿನ ಜಗತ್ತಿನಲ್ಲಿ ತಂತ್ರಜ್ಞಾನದಿಂದ ಪ್ರೇರಿತವಾದ ವೇಗದ ಬದಲಾವಣೆಗಳನ್ನು ತರಲು ಸರ್ಕಾರದ ಎಲ್ಲಾ ಸಂಸ್ಥೆಗಳು ಸರ್ಕಾರದ ದೃಷ್ಟಿಕೋನವನ್ನು ಹಂಚಿಕೊಳ್ಳುವ ಅಗತ್ಯವಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.