ನವದೆಹಲಿ: ತೃತೀಯಲಿಂಗಿ ಸಮುದಾಯ ಮತ್ತು ಭಿಕ್ಷಾಟನೆಯಲ್ಲಿ ತೊಡಗಿರುವವರಲ್ಲಿ ಆತ್ಮಸ್ಥೈರ್ಯ ಮತ್ತು ಭದ್ರತೆಯನ್ನು ತರಲು ಸರ್ಕಾರ ಬದ್ಧವಾಗಿದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ.ವೀರೇಂದ್ರ ಕುಮಾರ್ ಹೇಳಿದ್ದಾರೆ.
ಇಂದು ನವದೆಹಲಿಯಲ್ಲಿ ಈ ಸಮುದಾಯದವರಿಗಾಗಿ ಮಹತ್ವಾಕಾಂಕ್ಷೆಯ ಸ್ಮೈಲ್ (SMILE- Support for Marginalized Individual for Livelihood and Enterprise) ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು. ಇದು ತೃತೀಯಲಿಂಗಿ ಸಮುದಾಯ ಮತ್ತು ಭಿಕ್ಷಾಟನೆಯಲ್ಲಿ ತೊಡಗಿರುವ ಜನರಿಗೆ ಕಲ್ಯಾಣ ಕ್ರಮಗಳನ್ನು ಒದಗಿಸಲು ವಿನ್ಯಾಸಗೊಳಿಸಲಾದ ಸರ್ಕಾರದ ಅಂಬ್ರೆಲ್ಲಾ ಯೋಜನೆಯಾಗಿದೆ.
ಕೌಶಲ್ಯ ತರಬೇತಿ ಮತ್ತು ಆಧುನಿಕ ಶಿಕ್ಷಣದೊಂದಿಗೆ ಈ ಯೋಜನೆಯು ತೃತೀಯಲಿಂಗಿ ಸಮುದಾಯವು ಮುಖ್ಯವಾಹಿನಿಯಲ್ಲಿ ಮುನ್ನಡೆಯಲು ಖಂಡಿತವಾಗಿಯೂ ಅನುವು ಮಾಡಿಕೊಡುತ್ತದೆ ಎಂದ ಸಚಿವರು, ಇದು ಪ್ರಧಾನಿ ನರೇಂದ್ರ ಮೋದಿಯವರ ಸಬ್ಕಾ ಸಾಥ್ ಸಬ್ಕಾ ವಿಕಾಸ್ ದೃಷ್ಟಿಯನ್ನು ಸಾಕಾರಗೊಳಿಸುತ್ತದೆ. ಮುಂದಿನ ಐದು ವರ್ಷಗಳವರೆಗೆ ಈ ಯೋಜನೆಗಾಗಿ ತಮ್ಮ ಸಚಿವಾಲಯವು 100 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಬಜೆಟ್ ಅನ್ನು ನಿಗದಿಪಡಿಸಿದೆ ಎಂದು ಹೇಳಿದರು.
ಸಚಿವಾಲಯವು 2021-22 ರಿಂದ 2025-26 ರವರೆಗೆ ಯೋಜನೆಗೆ 365 ಕೋಟಿ ರೂಪಾಯಿಗಳನ್ನು ನಿಗದಿಪಡಿಸಿದೆ. ಇದು ಎರಡು ಉಪ ಯೋಜನೆಗಳನ್ನು ಒಳಗೊಂಡಿದೆ – ‘ತೃತೀಯಲಿಂಗಿ ವ್ಯಕ್ತಿಗಳ ಕಲ್ಯಾಣಕ್ಕಾಗಿ ಸಮಗ್ರ ಪುನರ್ವಸತಿಗಾಗಿ ಕೇಂದ್ರ ವಲಯದ ಯೋಜನೆ’ ಮತ್ತು ‘ಭಿಕ್ಷಾಟನೆಯ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಗಳ ಸಮಗ್ರ ಪುನರ್ವಸತಿಗಾಗಿ ಕೇಂದ್ರ ವಲಯದ ಯೋಜನೆ.
ಯೋಜನೆಯು ಹಕ್ಕುಗಳ ವ್ಯಾಪ್ತಿಯನ್ನು ಬಲಪಡಿಸುತ್ತದೆ ಮತ್ತು ವಿಸ್ತರಿಸುತ್ತದೆ ಅದು ಉದ್ದೇಶಿತ ಗುಂಪಿಗೆ ಅಗತ್ಯವಾದ ಕಾನೂನು ರಕ್ಷಣೆ ಮತ್ತು ಸುರಕ್ಷಿತ ಜೀವನಕ್ಕೆ ಭರವಸೆ ನೀಡುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.