ಬೆಂಗಳೂರು: ಹಿಜಾಬ್ ವಿವಾದದ ಕಾರಣ ಮುಚ್ಚಲ್ಪಟ್ಟಿದ್ದ 9 ಮತ್ತು 10ನೇ ತರಗತಿ ಶಾಲೆಗಳು ಇಂದಿನಿಂದ ತೆರೆಯಲ್ಪಡುತ್ತಿವೆ. ಈಗಾಗಲೇ ತರಗತಿಗಳು ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಹಿಜಾಬ್ ವಿವಾದದ ಕೇಂದ್ರ ಬಿಂದುವಾದ ಉಡುಪಿಯಲ್ಲಿ ಹೆಚ್ಚನ ಭದ್ರತೆಯನ್ನು ವಿಧಿಸಲಾಗಿದೆ.
ಮುಂಜಾಗ್ರತೆ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತ ಸೆಕ್ಷನ್ 144ರ ಅಡಿಯಲ್ಲಿ ಫೆಬ್ರವರಿ 19ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅಲ್ಲದೆ, ಮೈಸೂರು, ಶಿವಮೊಗ್ಗ, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲೂ ಪ್ರೌಢಶಾಲೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಸೆಕ್ಷನ್ 144 ಸೆಕ್ಷನ್ ಜಾರಿಯಲ್ಲಿದೆ.
ಹಿಜಾಬ್-ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೈಸ್ಕೂಲು-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿತ್ತು. 1-8ನೇ ತರಗತಿಗಳು ಸಹಜವಾಗಿ ನಡೆಯುತ್ತಿವೆ.
ಹೈಕೋರ್ಟ್ ಮಧ್ಯಂತರ ಆದೇಶವನ್ನು ಹೊರಡಿಸಿ ತರಗತಿಗಳನ್ನು ಆರಂಭಿಸುವಂತೆ ಸೂಚನೆ ನೀಡಿದೆ. ಅಲ್ಲದೇ ತೀರ್ಪು ಬರುವವರೆಗೂ ಯಾವುದೇ ಧಾರ್ಮಿಕ ಸೂಚಕಗಳು ಇರುವ ಧಿರಿಸುಗಳನ್ನು ತೊಡಬಾರದು ಎಂದು ಆದೇಶಿಸಿದೆ.
ಮೊದಲ ಹಂತವಾಗಿ 9-10ನೇ ತರಗತಿ ತೆರೆಯುತ್ತೇವೆ. ನಂತರ ಕಾಲೇಜು ತೆರೆಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸರ್ಕಾರ ತಿಳಿಸಿದೆ.
Karnataka: Schools for classes up to std 10th reopen today after they were closed in wake of #Hijab row.
Visuals from Government High School in Udupi. pic.twitter.com/xGoCHDq7mj
— ANI (@ANI) February 14, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.