ನವದೆಹಲಿ: ಪುಲ್ವಾಮ ದಾಳಿಯ ಕರಾಳ ಘಟನೆಗೆ ಇಂದು ಮೂರು ವರ್ಷ. 2019ರ ಫೆಬ್ರವರಿ 14ರಂದು ನಡೆದ ದಾಳಿ 40 ಯೋಧರ ಪ್ರಾಣವನ್ನು ಕಸಿದುಕೊಂಡಿತ್ತು. ಈ ವೀರ ಯೋಧರಿಗೆ ಇಂದು ದೇಶ ನಮನ ಸಲ್ಲಿಸುತ್ತಿದೆ.
2019 ರಲ್ಲಿ ಪುಲ್ವಾಮಾದಲ್ಲಿ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿಗೆ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದರು ಮತ್ತು ಅವರ ಶೌರ್ಯ ಮತ್ತು ಸರ್ವೋಚ್ಚ ತ್ಯಾಗವು ಪ್ರತಿಯೊಬ್ಬ ಭಾರತೀಯನನ್ನು ಬಲವಾದ ಮತ್ತು ಸಮೃದ್ಧ ದೇಶಕ್ಕಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ ಎಂದು ಹೇಳಿದರು.
ದಕ್ಷಿಣ ಕಾಶ್ಮೀರ ಜಿಲ್ಲೆಯಲ್ಲಿ ಪಾಕಿಸ್ಥಾನ ಪ್ರಾಯೋಜಿತ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 40 ಸಿಆರ್ಪಿಎಫ್ ಯೋಧರು ಪರಮ ತ್ಯಾಗ ಮಾಡಿದ್ದಾರೆ.
ಪ್ರತೀಕಾರದ ದಾಳಿಯಲ್ಲಿ, ಭಾರತೀಯ ವಾಯುಪಡೆಯು ಫೆಬ್ರವರಿ 26, 2019 ರಂದು ಪಾಕಿಸ್ಥಾನದ ಬಾಲಾಕೋಟ್ನಲ್ಲಿ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿತ್ತು.
“2019 ರ ಈ ದಿನದಂದು ಪುಲ್ವಾಮಾದಲ್ಲಿ ಹುತಾತ್ಮರಾದ ಎಲ್ಲರಿಗೂ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಮತ್ತು ನಮ್ಮ ದೇಶಕ್ಕೆ ಅವರ ಅತ್ಯುತ್ತಮ ಸೇವೆಯನ್ನು ಸ್ಮರಿಸಿಕೊಳ್ಳುತ್ತೇನೆ. ಅವರ ಶೌರ್ಯ ಮತ್ತು ಅತ್ಯುನ್ನತ ತ್ಯಾಗವು ಪ್ರತಿ ಭಾರತೀಯನನ್ನು ಬಲಿಷ್ಠ ಮತ್ತು ಸಮೃದ್ಧ ದೇಶಕ್ಕಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ” ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
I pay homage to all those martyred in Pulwama on this day in 2019 and recall their outstanding service to our nation. Their bravery and supreme sacrifice motivates every Indian to work towards a strong and prosperous country.
— Narendra Modi (@narendramodi) February 14, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.