ನವದೆಹಲಿ: ಭಾರತದ ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಯ ವೈಭವವನ್ನು ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಅವರು ಹಾಡಿ ಹೊಗಳಿದ್ದಾರೆ. ಪ್ರಸ್ತುತ ಭಾರತ ಪ್ರವಾಸದಲ್ಲಿರುವ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕೇರಳದಲ್ಲಿ ತಮ್ಮ ಮಗಳು ಪಡೆದ ಆಯುರ್ವೇದ ಚಿಕಿತ್ಸೆಯ ಬಗ್ಗೆ ಅವರು ಶ್ಲಾಘನೆ ವ್ಯಕ್ತಪಡಿಸಿರುವ ಅವರು, ಈ ಚಿಕಿತ್ಸೆಯಿಂದ ಆಕೆಗೆ ದೃಷ್ಟಿಯನ್ನು ಮರಳಿ ಪಡೆಯಲು ಸಹಾಯವಾಗಿದೆ ಎಂದು ಹೇಳಿದ್ದಾರೆ. ಮಾತ್ರವಲ್ಲದೇ, ಒಡಿಂಗಾ ಅವರು ಆಯುರ್ವೇದ ಚಿಕಿತ್ಸೆಯನ್ನು ಆಫ್ರಿಕನ್ ನೆಲಕ್ಕೆ ತರಬೇಕು ಎಂಬ ಇಚ್ಛೆಯನ್ನು ವ್ಯಕ್ತಪಡಿಸಿದರು.
ʼನನ್ನ ಮಗಳಿಗೆ ಮೆದುಳಿನಲ್ಲಿ ರಕ್ತಸ್ರಾವವಾಗಿತ್ತು ಮತ್ತು ಸುಮಾರು ಮೂರು ವರ್ಷಗಳ ಹಿಂದೆ ನೈರೋಬಿ ಮತ್ತು ನಂತರ ದಕ್ಷಿಣ ಆಫ್ರಿಕಾದಲ್ಲಿ ಶಸ್ತ್ರಚಿಕಿತ್ಸೆ ಕೊಡಿಸಲಾಯಿತು. ಆದರೆ ಅವಳಿಗೆ ತನ್ನ ದೃಷ್ಟಿಯನ್ನು ಮರಳಿ ಪಡೆಯಲು ಸಾಧ್ಯವಾಗಲಿಲ್ಲ. ಕೇರಳದ ಕೊಚ್ಚಿನ್ನಲ್ಲಿ ಆಯುರ್ವೇದ ಚಿಕಿತ್ಸೆಯ ಬಗ್ಗೆ ತಿಳಿದು ಭಾರತಕ್ಕೆ ಆಗಮಿಸಿದೆ, ಅಲ್ಲಿ ನನ್ನ ಮಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು. ಮಗಳಿಗೆ ದೃಷ್ಟಿ ಮರಳಿದೆ” ಎಂದಿದ್ದಾರೆ.
ಮಾತುಕತೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ಕಥೆಯನ್ನು ವಿವರಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ಈ ಚಿಕಿತ್ಸಾ ವಿಧಾನವನ್ನು ಆಫ್ರಿಕಾಕ್ಕೆ ಕೊಂಡೊಯ್ಯಲು ಮತ್ತು ಸ್ಥಳೀಯ ಸಸ್ಯಗಳನ್ನು ಚಿಕಿತ್ಸೆಗಾಗಿ ಬಳಸಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.
ರೈಲಾ ಅಮೊಲೊ ಒಡಿಂಗಾ ಕೀನ್ಯಾದ ಮಾಜಿ ಪ್ರಧಾನಿ. ಭಾರತ ಮತ್ತು ಕೀನ್ಯಾದಲ್ಲಿ ಮೋದಿಯೊಂದಿಗೆ ನಡೆಸಿದ ಹಿಂದಿನ ಸಂವಾದಗಳನ್ನು ನೆನಪಿಸಿಕೊಂಡ ಅವರು, ಎರಡೂ ದೇಶಗಳು ಅತ್ಯುತ್ತಮ ದ್ವಿಪಕ್ಷೀಯ ಸಂಪರ್ಕಗಳನ್ನು ಹೊಂದಿವೆ ಮತ್ತು ಅವುಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಎದುರು ನೋಡುತ್ತಿದ್ದೇವೆ ಎಂದು ಹೇಳಿದರು.
Delighted to receive my friend H.E. Raila Amolo Odinga, former Prime Minister of Kenya. I fondly recollect my past interactions with him in India and Kenya.
India and Kenya enjoy strong bilateral relations and we welcome further strengthening of our ties. pic.twitter.com/vz39ij5y4f
— Narendra Modi (@narendramodi) February 13, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.