ನವದೆಹಲಿ: ಕ್ರಿಪ್ಟೋಕರೆನ್ಸಿ ವಿಚಾರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಂಡರೂ ಸರ್ಕಾರ ಮತ್ತು ಆರ್ಬಿಐ ಜಂಟಿಯಾಗಿಯೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೇವಲ ಕ್ರಿಪ್ಟೋಕರೆನ್ಸಿಯಲ್ಲಿ ಮಾತ್ರವಲ್ಲದೆ ಇತರ ಪ್ರತಿಯೊಂದು ವಿಷಯದಲ್ಲೂ ಸರ್ಕಾರ ಮತ್ತು ಆರ್ಬಿಐ ಸಂಪೂರ್ಣ ಸಮನ್ವಯದೊಂದಿಗೆ ಕೆಲಸ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.
ವಾಡಿಕೆಯಂತೆ ಆರ್ಬಿಐನ ಕೇಂದ್ರೀಯ ನಿರ್ದೇಶಕರ ಮಂಡಳಿಯ ಬಜೆಟ್ ನಂತರದ ಸಭೆಯಲ್ಲಿ ಭಾಗವಹಿಸಿದ ಬಳಿಕ ಇಂದು ನವದೆಹಲಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸಚಿವರು ಈ ವಿಷಯ ತಿಳಿಸಿದರು.
ಎಬಿಜಿ ಶಿಪ್ಯಾರ್ಡ್ ಲಿಮಿಟೆಡ್ ಪ್ರಕರಣದ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಎಬಿಜಿ ಶಿಪ್ಯಾರ್ಡ್ ವಂಚನೆ ಪ್ರಕರಣವನ್ನು ಪತ್ತೆಹಚ್ಚಲು ಮತ್ತು ಕ್ರಮ ತೆಗೆದುಕೊಳ್ಳಲು ಎನ್ಡಿಎ ಸರ್ಕಾರ ಕಡಿಮೆ ಸಮಯ ತೆಗೆದುಕೊಂಡಿತು. ಈ ಪ್ರಕರಣದಲ್ಲಿ ವಂಚನೆಯನ್ನು ಪತ್ತೆಹಚ್ಚಲು ಬ್ಯಾಂಕ್ ಸರಾಸರಿಗಿಂತ ಕಡಿಮೆ ಸಮಯವನ್ನು ತೆಗೆದುಕೊಂಡಿದೆ ಎಂದಿದ್ದಾರೆ.
ಇದು 2013 ರ ಮೊದಲು ನೀಡಲಾದ ಸಾಲವಾಗಿದೆ ಮತ್ತು 2014 ರ ಜನವರಿಯ ಮೊದಲು ಖಾತೆಯು ಎನ್ಪಿಎ ಆಗಿತ್ತು ಎಂದು ಸಚಿವರು ಹೇಳಿದರು. ದೇಶದಲ್ಲಿ ಬ್ಯಾಂಕ್ಗಳ ಒಟ್ಟಾರೆ ಆರೋಗ್ಯ ಸುಧಾರಿಸಿದೆ ಎಂದು ಸೀತಾರಾಮನ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ, ಆರ್ಬಿಐ ಶಕ್ತಿಕಾಂತ ದಾಸ್, ದೇಶದ ಹಣದುಬ್ಬರ ಪ್ರಕ್ಷೇಪಗಳು ಸಾಕಷ್ಟು ದೃಢವಾಗಿವೆ ಮತ್ತು ಕಳೆದ ಅಕ್ಟೋಬರ್ನಿಂದ ಹಣದುಬ್ಬರದ ಆವೇಗವು ಇಳಿಜಾರಿನಲ್ಲಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.