ಬೆಂಗಳೂರು: 10 ದಿನಗಳ ವಿಧಾನಮಂಡಲ ಜಂಟಿ ಅಧಿವೇಶನ ಇಂದು ಆರಂಭಗೊಂಡಿದೆ. ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 30 ಪುಟಗಳ ಭಾಷಣವನ್ನು ಮಾಡಿದ್ದಾರೆ.
ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪರಿಣಾಮಕಾರಿ ನಿಯಂತ್ರಣ ಕ್ರಮಗಳನ್ನು ಕೈಗೊಂಡಿವೆ ಎಂದು ರಾಜ್ಯಪಾಲರು ಶ್ಲಾಘಿಸಿದ್ದಾರೆ.
ರಾಜ್ಯ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದ ರಾಜ್ಯಪಾಲರು, ರಾಜ್ಯದಲ್ಲಿ ದೈನಂದಿನ 6 ಸಾವಿರ ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ದಿನಾಂಕ ಜನವರಿ 23ರವರೆಗೆ ಒಟ್ಟು 9.33 ಕೋಟಿ ಅರ್ಹ ಫಲಾನುಭವಿಗಳಿಗೆ ನೀಡಲಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡ 100ರಷ್ಟು ಜನರಿಗೆ ಮೊದಲನೇ ಡೋಸ್ ಹಾಗೂ ಶೇ.85ರಷ್ಟು ಜನರಿಗೆ ಕೋವಿಡ್ ನ ಎರಡೂ ಡೋಸ್ ಗಳನ್ನು ನೀಡಲಾಗಿದೆ ಎಂದಿದ್ದಾರೆ.
ಕರ್ನಾಟಕದಲ್ಲಿ ಒಟ್ಟು 6 ಕೋಟಿ ಕೋವಿಡ್ ಟೆಸ್ಟ್ ಗಳನ್ನು ನಡೆಸಲಾಗಿದೆ. ದೇಶದಲ್ಲಿಯೇ ಹೆಚ್ಚು ಟೆಸ್ಟ್ ಗಳನ್ನು ನಡೆಸಿದ ರಾಜ್ಯಗಳಲ್ಲಿ ಒಂದು ಎಂದರು.
ಕೋವಿಡ್-19ರ ಹೊಸ ರೂಪಾಂತರಿ ತಳಿಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜೀನೋಮ್ ಸೀಕ್ವೆನ್ಸಿಂಗ್ ನಡೆಸಲು ರಾಜ್ಯದಲ್ಲಿ ಐದು INSACOG ಪ್ರಮಾಣಿತ ಪ್ರಯೋಗ ಶಾಲೆಗಳು ಲಭ್ಯವಿದೆ. ರಾಜ್ಯಗಳ ಆಸ್ಪತ್ರೆಗಳಲ್ಲಿ 55,256 ಎಚ್ಡಿಯು ಬೆಡ್ ಗಳು, 7216 ಐಸಿಯು ಬೆಡ್ ಗಳು, 123 ಐಸಿಯು ವೆಂಟಿಲೇಟರ್ (ಒಟ್ಟು 1,94,363) ಬೆಡ್ ಗಳು ಲಭ್ಯ ಇವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.