ರಾಂಚಿ: ಮೇವು ಹಗರಣ ಪ್ರಕರಣದ ಡೊರಾಂಡಾ ಖಜಾನೆಯ ಹಣಕಾಸು ವಂಚನೆ ಆರೋಪದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ದೋಷಿ ಎಂದು ತೀರ್ಪು ನೀಡಿದೆ.
ಜಾನುವಾರುಗಳ ಮೇವಿಗಾಗಿ ಮೀಸಲಿಟ್ಟ ಸರ್ಕಾರದ ಹಣವನ್ನು ಲಪಟಾಯಿಸಿದ ಕುಖ್ಯಾತ ರೂ 950 ಕೋಟಿ ಮೇವು ಹಗರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರ್ಜೆಡಿ ಮುಖ್ಯಸ್ಥ ಲಾಲೂ ಈಗಾಗಲೇ ನಾಲ್ಕು ಪ್ರಕರಣಗಳಲ್ಲಿ ದೋಷಿಯಾಗಿದ್ದಾರೆ.
“ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯವು 36 ಮಂದಿಗೆ ತಲಾ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಲಾಲು ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ಘೋಷಿಸಲಾಗಿದೆ. ಅವರಿಗೆ ಶಿಕ್ಷೆಯ ಪ್ರಮಾಣವನ್ನು ಇನ್ನೂ ಪ್ರಕಟಿಸಬೇಕಾಗಿದೆ” ಎಂದು ವಕೀಲ ಸಂಜಯ್ ಕುಮಾರ್ ತಿಳಿಸಿದ್ದಾರೆ.
ಫೆಬ್ರವರಿ 21 ರಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಈಗಾಗಲೇ ಎಲ್ಲಾ ನಾಲ್ಕು ಹಿಂದಿನ ಅಪರಾಧಗಳನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಿರುವ ಲಾಲು ಯಾದವ್, ಈ ಶಿಕ್ಷೆಯನ್ನು ಸಹ ಪ್ರಶ್ನಿಸುವ ಸಾಧ್ಯತೆಯಿದೆ.
ಇಲ್ಲಿಯವರೆಗೆ, ಲಾಲುಗೆ ಒಟ್ಟು 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಆದರೆ ನಾಲ್ಕು ಅಪರಾಧಿ ಪ್ರಕರಣಗಳಿಗೆ ಜಾಮೀನಿನ ಮೇಲೆ ಹೊರಗಿದ್ದಾರೆ.
Fodder scam: RJD chief Lalu Prasad Yadav convicted of fraudulent withdrawal from Doranda treasury by a CBI Special Court in Ranchi pic.twitter.com/J9AvvhmOjk
— ANI (@ANI) February 15, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.