ನವದೆಹಲಿ: ಸಂತ ರವಿದಾಸ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕರೋಲ್ ಬಾಗ್ನಲ್ಲಿರುವ ‘ಶ್ರೀ ಗುರು ರವಿದಾಸ್ ವಿಶ್ರಮ್ ಧಾಮ್ ಮಂದಿರ’ಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ದೇವಾಲಯದಲ್ಲಿ ನಡೆದ ‘ಶಾಬಾದ್ ಕೀರ್ತನೆ’ಯಲ್ಲಿ ಪ್ರಧಾನಮಂತ್ರಿಯವರು ಪಾಲ್ಗೊಂಡರು.
ರವಿದಾಸ್ ಅವರು ಜಾತೀಯತೆ ಮತ್ತು ಅಸ್ಪೃಶ್ಯತೆಯಂತಹ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿರು. ತಮ್ಮ ಸರ್ಕಾರವು ಪ್ರತಿ ಹೆಜ್ಜೆ ಮತ್ತು ಯೋಜನೆಯಲ್ಲಿ ಗುರು ರವಿದಾಸ್ ಅವರ ಚೈತನ್ಯವನ್ನು ತುಂಬಿಕೊಂಡಿದೆ ಎಂದು ಮೋದಿ ಹೇಳಿದರು.
ನಿನ್ನೆ ಟ್ವಿಟ್ ಮಾಡಿದ್ದ ಮೋದಿ, “ನಾಳೆ ಮಹಾನ್ ಸಂತ ಗುರು ರವಿದಾಸ್ ಜಿ ಅವರ ಜನ್ಮದಿನ. ಅವರು ಸಮಾಜದಿಂದ ಜಾತಿವಾದ ಮತ್ತು ಅಸ್ಪೃಶ್ಯತೆಯಂತಹ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ರೀತಿ, ಇಂದಿಗೂ ನಮಗೆಲ್ಲರಿಗೂ ಸ್ಫೂರ್ತಿಯಾಗಿದೆ” ಎಂದಿದ್ದಾರೆ.
#WATCH | Prime Minister Narendra Modi takes part in 'Shabad Kirtan' at Shri Guru Ravidas Vishram Dham Mandir in Delhi's Karol Bagh on the occasion of Ravidas Jayanti
Source: DD pic.twitter.com/pa2YLWqFnE
— ANI (@ANI) February 16, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.