ಬೆಂಗಳೂರು: ಸಾಫ್ಟ್ವೇರ್ ಸಮಸ್ಯೆಯಿಂದಾಗಿ ಬಿಪಿಎಲ್ ಕಾರ್ಡ್, ಹಿರಿಯ ನಾಗರಿಕ ಪಿಂಚಣಿ, ಸಂಧ್ಯಾ ಸುರಕ್ಷ ಅಂಗ ವಿಕಲಮಾಸಿಕ ಪಿಂಚಣಿ ಸೇರಿದಂತೆ ವಿವಿಧ ಮಾಸಿಕ ಪಿಂಚಣಿ ಪಡೆಯಲು ಫಲಾನುಭವಿಗಳು ಅನುಭವಿಸುವ ಸಮಸ್ಯೆಯ ಕುರಿತು ಶಾಸಕ ವೇದವ್ಯಾಸ ಕಾಮತ್ ಅವರು ಸದನದ ಗಮನ ಸೆಳೆದಿದ್ದಾರೆ.
ಸದನದಲ್ಲಿ ಮಾತನಾಡಿದ ಅವರು, ಸಾಫ್ಟ್ವೇರ್ ಸಮಸ್ಯೆಯಿಂದಾಗಿ ಬಿಪಿಎಲ್ ಕಾರ್ಡ್ ಬದಲಾಗಿ ಎಪಿಎಲ್ ಕಾರ್ಡ್ ಪರಿವರ್ತನೆಯಾಗುವುದರಿಂದ ಮಾಸಿಕ ಪಿಂಚಣಿ, ಹಿರಿಯ ನಾಗರಿಕ ಪಿಂಚಣಿ, ಸಂಧ್ಯಾ ಸುರಕ್ಷಾ, ಅಂಗವಿಕಲ ಮಾಸಿಕ ಪಿಂಚಣಿ ಸೇರಿದಂತೆ ವಿವಿಧ ಪಿಂಚಣಿ ಪಡೆಯಲು ಫಲಾನುಭವಿಗಳಿಗೆ ಸಮಸ್ಯೆ ಎದುರಾಗುತ್ತಿದೆ. ಈ ಬಗ್ಗೆ ಕಂದಾಯ ಸಚಿವರ ಗಮನ ಸೆಳೆಯಲು ಬಯಸುತ್ತೇನೆ ಎಂದಿದ್ದಾರೆ.
ಅಲ್ಲದೇ, ಈ ಎಲ್ಲಾ ಮಾಸಿಕ ಪಿಂಚಣಿ ಪಡೆಯಲು ಆದಾಯ ಮಿತಿ 32000 ರೂಪಾಯಿ ಎಂದು ನಿಗದಿಪಡಿಸಲಾಗಿದೆ. ವರ್ತಮಾನ ಪರಿಸ್ಥಿತಿಯನ್ನು ಗಮನಿಸಿಕೊಂಡು ಆದಾಯ ಮಿತಿಯನ್ನು ಏರಿಸಬೇಕಾಗಿ ಅವರು ಮನವಿ ಮಾಡಿದ್ದಾರೆ.
ಆಹಾರ ಇಲಾಖೆಯಲ್ಲಿ ಕೂಡ ಹಲವು ರೀತಿಯ ಸಮಸ್ಯೆಗಳು ಎದುರಾಗುತ್ತಿವೆ. ಈ ಬಗ್ಗೆ ಆಹಾರ ಮತ್ತು ಕಂದಾಯ ಇಲಾಖೆ ಗಮನ ನೀಡಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
ಪಿಂಚಣಿ ಪಡೆದುಕೊಳ್ಳುವ ಬಡವರ್ಗದ ವ್ಯಕ್ತಿಗಳಿಗೆ ಪಿಂಚಣಿಯನ್ನು ಸಮರ್ಪಕವಾಗಿ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದ ಅವರು, ತಾಂತ್ರಿಕ ದೋಷದ ಪರಿಣಾಮ ಕೂಡ ಅರ್ಹರು ಪಿಂಚಣಿಯಿಂದ ವಂಚಿತರಾದ ಘಟನೆಗಳು ನಡೆದಿವೆ ಈ ಬಗ್ಗೆಯೂ ಸರ್ಕಾರ ಗಮನ ನೀಡಬೇಕು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.