ನವದೆಹಲಿ: ರಷ್ಯಾ-ಉಕ್ರೇನ್ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ, ಉಕ್ರೇನ್ನಲ್ಲಿರುವ ಕೆಲವು ಭಾರತೀಯ ವಿದ್ಯಾರ್ಥಿಗಳ ಪೋಷಕರು ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಭಾರತ ಮತ್ತು ಉಕ್ರೇನ್ ನಡುವೆ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲು ಭಾರತ ಚಿಂತನೆ ನಡೆಸುತ್ತಿದೆ.
“ಭಾರತ ಮತ್ತು ಉಕ್ರೇನ್ ನಡುವಿನ ವಿಮಾನಗಳ ಸಂಖ್ಯೆಯನ್ನು ಹೇಗೆ ಹೆಚ್ಚಿಸುವುದು ಎಂಬುದರ ಕುರಿತು ನಾಗರಿಕ ವಿಮಾನಯಾನ ಅಧಿಕಾರಿಗಳು ಮತ್ತು ವಿವಿಧ ವಿಮಾನಯಾನ ಸಂಸ್ಥೆಗಳೊಂದಿಗೆ ಚರ್ಚೆಗಳು ನಡೆಯುತ್ತಿವೆ” ಎಂದು ಮೂಲಗಳು ತಿಳಿಸಿವೆ.
ಕೈವ್ನಲ್ಲಿರುವ ಭಾರತದ ರಾಯಭಾರ ಕಚೇರಿಯು ಉಕ್ರೇನ್ನಲ್ಲಿರುವ ಭಾರತೀಯ ಪ್ರಜೆಗಳಿಗೆ ಉಕ್ರೇನ್ ತೊರೆಯುವಂತೆ ಸಲಹೆಯನ್ನು ನೀಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ರಷ್ಯಾ ಮತ್ತು ನ್ಯಾಟೋ ದೇಶಗಳ ನಡುವಿನ ಉದ್ವಿಗ್ನತೆಯ ಮಧ್ಯೆ ಉಕ್ರೇನ್ನಲ್ಲಿರುವ ತನ್ನ ನಾಗರಿಕರಿಗೆ ಆ ದೇಶವನ್ನು ತಾತ್ಕಾಲಿಕವಾಗಿ ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ ಸಲಹೆ ನೀಡಿದೆ.
“ರಾಯಭಾರ ಕಚೇರಿಯು ಬೆಳವಣಿಗೆಗಳ ಮೇಲ್ವಿಚಾರಣೆಯನ್ನು ಮುಂದುವರೆಸಿದೆ” ಎಂದು ಮೂಲಗಳು ತಿಳಿಸಿವೆ.
Embassy of India in Kyiv continues to monitor the situation on a regular basis. Some FAQs for Indian citizens are placed below, and all citizens are advised to go through the same. @MEAIndia @DrSJaishankar @PIB_India @DDNewslive @DDNewsHindi @IndiainUkraine @IndianDiplomacy pic.twitter.com/mAJXu3f2Ux
— India in Ukraine (@IndiainUkraine) February 16, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.