ಬೆಂಗಳೂರು: “ದೇಶದ ಇತಿಹಾಸದಲ್ಲಿ ಸದನದಲ್ಲಿ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದು ಇದೇ ಮೊದಲು. ಕಾಂಗ್ರೆಸ್ ಸದನದಲ್ಲಿ ರಾಷ್ಟ್ರಧ್ವಜವನ್ನು ಬೇಕಾಬಿಟ್ಟಿಯಾಗಿ ಬಳಸಿದ್ದು ಅಪರಾಧ. ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ ದಿನದಲ್ಲೂ ಕೂಡ ಒಂದು ನಿಯಮದಂತೆ ರಾಷ್ಟ್ರಧ್ವಜ ಹಾರಿಸಲಾಗುತ್ತದೆ. ಅದಕ್ಕೆ ಅದರದ್ದೇ ಆದ ಘನತೆ ಇದೆ. ನಿಜಕ್ಕೂ ನಾವು ಜನರಿಗೆ, ಮಕ್ಕಳಿಗೆ ಮಾದರಿಯಾಗಬೇಕು. ಮಕ್ಕಳೂ ಕೂಡ ಎದ್ದು ನಿಂತು ಧ್ವಜಕ್ಕೆ ಗೌರವ ಕೊಡ್ತಾರೆ. ನಾವೇ ಈ ರೀತಿ ವರ್ತಿಸಿದರೆ ಹೇಗೆ? ಇದು ಕಾಂಗ್ರೆಸ್ ನ ಹೀನ ಸಂಸ್ಕೃತಿಯ ಅನಾವರಣ” ಎಂದು ಕಂದಾಯ ಸಚಿವ ಆರ್. ಅಶೋಕ್ ಸದನದಲ್ಲಿ ಕಾಂಗ್ರೆಸ್ ವರ್ತನೆಯನ್ನು ಖಂಡಿಸಿದ್ದಾರೆ.
“ಇಂದು ಕಾಂಗ್ರೆಸ್ ನವರು ಸದನದ ಬಾವಿಗಿಳಿದು ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಕಾಂಗ್ರೆಸ್ ನವರಿಗೆ ನಾನು ಕೇಳುತ್ತೇನೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸುವಾಗ ಇವರ್ಯಾರು ಬರಲೇ ಇಲ್ಲ. ನಾನು ಸಹ ಆ ಸಂದರ್ಭದಲ್ಲಿ ಪ್ರತ್ಯಕ್ಷ ಸಾಕ್ಷಿ. ಪೋಲೀಸರಿಂದ ಬಂಧನಕ್ಕೊಳಗಾಗಿ, ಪೆಟ್ಟು ತಿಂದವರಲ್ಲಿ ನಾನೂ ಒಬ್ಬ. ಕಾಶ್ಮೀರದಲ್ಲಿ ಧ್ವಜ ಹಾರಿಸಿ ನೋಡಿ ಅಂತ ಭಯೋತ್ಪಾದಕರು ಕರೆ ನೀಡಿದಾಗಲೂ ಕಾಂಗ್ರೆಸ್ ನವರು ಹೆದರಿ ಇಲಿಯಂತೆ ಬಿಲ ಸೇರಿದ್ದರು. ಆಗ ಕಾಶ್ಮೀರದಲ್ಲಿ ಧ್ವಜ ಹಾರಿಸಿದ್ದು ಬಿಜೆಪಿ” ಎಂದಿದ್ದಾರೆ.
ಈ ಸಂದರ್ಭದಲ್ಲಿ ಈಶ್ವರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಯಾಕೆಂದರೆ ಎಂದೂ ‘ಭಾರತ್ ಮಾತಾಕೀ ಜೈ’ ಹೇಳದ ಕಾಂಗ್ರೆಸ್, ಈ ನಿಟ್ಟಿನಲ್ಲಾದ್ರೂ ಜೈಕಾರ ಹಾಕಿದ್ದಾರೆ. ಕಾಂಗ್ರೆಸ್ ನ ಈ ವರ್ತನೆಗೆ, ಸದನದಲ್ಲಿ ಧ್ವಜಕ್ಕೆ ಮಾಡಿದ ಅಪಮಾನಕ್ಕೆ ಸಮಾಜ ತಕ್ಕ ಪಾಠ ಕಲಿಸುವ ದಿನ ದೂರ ಇಲ್ಲ” ಎಂದು ಅಕ್ರೋಶ ವ್ಯಕ್ತ ಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.