ನವದೆಹಲಿ: “ಕಾಂಗ್ರೆಸ್ ಸದಾ ರೈತರಿಗೆ ದ್ರೋಹ ಬಗೆಯುತ್ತಾ ಬಂದಿದೆ ಎಂಬುದಕ್ಕೆ ಇತಿಹಾಸವೇ ಸಾಕ್ಷಿ. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಬಹಳ ದಿನಗಳಿಂದ ಬೇಡಿಕೆಯಿತ್ತು. ಆದರೆ ಕಾಂಗ್ರೆಸ್ ಈ ಬಗ್ಗೆ ಮೌನವಾಗಿ ಕುಳಿತಿತ್ತು. ನಮ್ಮ ಸರ್ಕಾರ ರಚನೆಯಾದ ಬಳಿಕ ಆ ಶಿಫಾರಸುಗಳನ್ನು ಜಾರಿಗೆ ತಂದಿತು” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳದ್ದಾರೆ.
ಫೆಬ್ರವರಿ 20 ರಂದು ಪಂಜಾಬ್ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೋದಿ ಇಂದು ಪಂಜಾಬ್ನ ಫಾಜಿಲ್ಕಾ ಜಿಲ್ಲೆಯ ಅಬೋಹರ್ ಪಟ್ಟಣದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ಈ ದಶಕದಲ್ಲಿ ಬಿಜೆಪಿಗೆ ಅವಕಾಶ ನೀಡುವಂತೆ ಪಂಜಾಬ್ ಜನತೆಗೆ ಮನವಿ ಮಾಡಿದ ಮೋದಿ, ಇದರಿಂದ ಡಬಲ್ ಎಂಜಿನ್ ಸರ್ಕಾರವು ರಾಜ್ಯದಲ್ಲಿ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ ಎಂದರು.
“ಪಂಜಾಬ್ನಲ್ಲಿ ಡಬಲ್ ಇಂಜಿನ್ ಸರ್ಕಾರ ಬಂದರೆ ಈ ದಶಕದಲ್ಲಿ ರಾಜ್ಯದಲ್ಲಿ ಅತ್ಯಂತ ವೇಗದ ಅಭಿವೃದ್ಧಿಯಾಗುತ್ತದೆ. ಮರಳು ಮಾಫಿಯಾ, ಡ್ರಗ್ಸ್ ಮಾಫಿಯಾಗಳು ರಾಜ್ಯದಿಂದ ಕಣ್ಮರೆಯಾಗುತ್ತವೆ ಮತ್ತು ಕೈಗಾರಿಕೆಗಳು ಹೊಸ ಎತ್ತರವನ್ನು ಮುಟ್ಟುತ್ತವೆ ಮತ್ತು ಪಂಜಾಬ್ನ ಯುವಕರಿಗೆ ಉದ್ಯೋಗ, ಸ್ವಯಂ ಉದ್ಯೋಗಕ್ಕೆ ಹೊಸ ಅವಕಾಶಗಳು ಸಿಗುತ್ತದೆ ”ಎಂದಿದ್ದಾರೆ.
“ಇಂದು ಪಂಜಾಬ್ಗೆ ಪಂಜಾಬ್ನ ಅಭಿವೃದ್ಧಿಯಿಂದ ದೇಶಭಕ್ತಿಯಿಂದ ಸ್ಫೂರ್ತಿ ಪಡೆಯುವ ಸರ್ಕಾರದ ಅಗತ್ಯವಿದೆ. ಪಂಜಾಬ್ನ ಭದ್ರತೆ ಮತ್ತು ಅಭಿವೃದ್ಧಿಯ ಸಂಕಲ್ಪದೊಂದಿಗೆ ಬಿಜೆಪಿ ಸಮರ್ಪಣೆಯೊಂದಿಗೆ ನಿಮ್ಮ ಮುಂದೆ ಬಂದಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.