ಬೆಂಗಳೂರು: ರಾಜ್ಯದ 75,000 ಶಾಲಾ-ಕಾಲೇಜುಗಳ ಪೈಕಿ 8 ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಮಾತ್ರ ಹಿಜಾಬ್ ವಿವಾದ ಮುಂದುವರಿದಿದೆ ಎಂದು ಹೇಳಿದೆ, ಅಲ್ಲದೇ ಸಮಸ್ಯೆಯನ್ನು ಪರಿಹರಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳು ಪರಿಗಣನೆಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಕಳೆದ ವಾರ ಹೈಕೋರ್ಟ್ ಮಧ್ಯಂತರ ಆದೇಶವನ್ನು ಹೊರಡಿಸಿ, ಎಲ್ಲಾ ವಿದ್ಯಾರ್ಥಿಗಳು ಕೇಸರಿ ಶಾಲುಗಳು, ಸ್ಕಾರ್ಫ್ಗಳು, ಹಿಜಾಬ್ ಮತ್ತು ಯಾವುದೇ ಧಾರ್ಮಿಕ ಸೂಚಕ ಹೊಂದಿರುವ ವಸ್ತ್ರಗಳನ್ನು ತರಗತಿಯೊಳಗೆ ಧರಿಸಬಾರದು ಎಂದು ಸ್ಪಷ್ಟವಾಗಿ ತಿಳಿಸಿದೆ.
ಆದರೂ ಕೆಲವು ವಿದ್ಯಾರ್ಥಿಗಳು ಇಂದು ಕೂಡ ‘ಹಿಜಾಬ್’ ಮತ್ತು ‘ಬುರ್ಖಾ’ದೊಂದಿಗೆ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದು ಕುಳಿತಿದ್ದಾರೆ. ಇವರಿಗೆ ಪೋಷಕರ ಬೆಂಬಲವೂ ಇದೆ. ಹೀಗಾಗಿ ಕೆಲವು ಕಡೆ ವಿವಾದ ಭುಗಿಲೆದ್ದಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿ, “ಸಮಸ್ಯೆ ಕೇವಲ ಬೆರಳೆಣಿಕೆಯ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಮಾತ್ರ ಸೀಮಿತವಾಗಿದೆ. 75,000 ಶಾಲಾ-ಕಾಲೇಜುಗಳ ಪೈಕಿ ಎಂಟು ಕಾಲೇಜುಗಳಲ್ಲಿ ಸಮಸ್ಯೆ ಮುಂದುವರಿದಿದೆ, ಇದನ್ನು ನಾವು ಪರಿಹರಿಸುತ್ತೇವೆ. ಎಲ್ಲಾ ವಿದ್ಯಾರ್ಥಿಗಳು ಕೋರ್ಟ್ ಆದೇಶವನ್ನು ಅನುಸರಿಸಿರುವುದರಿಂದ ನಮಗೆ ಸಂತೋಷವಾಗಿದೆ” ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.