ನವದೆಹಲಿ: ಕಳೆದ ಎರಡು ವರ್ಷಗಳಿಂದ ಕೋವಿಡ್-19 ವಿರುದ್ಧ ಭಾರತ ನಿರಂತರವಾಗಿ ಹೋರಾಡುತ್ತಾ ಬಂದಿದೆ. ಈ ಹೋರಾಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮುಂಚೂಣಿಯಲ್ಲಿ ನಿಂತು ದೇಶವನ್ನು ಅಪಾಯದ ಪರಿಸ್ಥಿತಿಯಲ್ಲಿ ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಕೋವಿಡ್-19 ಹೋರಾಟದಲ್ಲಿ ಮೋದಿಯವರ ನಾಯಕತ್ವವನ್ನು ಎತ್ತಿ ಹಿಡಿಯುವ ಪುಸ್ತಕವೊಂದು ಇಂದು ಬಿಡುಗಡೆಯಾಗಿದೆ.
ಈ ಪುಸ್ತಕವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಆರೋಗ್ಯ ಸಚಿವಾಲಯದ ಇತರ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಿದ್ದಾರೆ.
“ಎ ನೇಷನ್ ಟು ಪ್ರೊಟೆಕ್ಟ್” ಎಂಬ ಶೀರ್ಷಿಕೆಯ ಪುಸ್ತಕವನ್ನು ಲೇಖಕ ಪ್ರಿಯಮ್ ಗಾಂಧಿ ಮೋದಿ ಅವರು ಬರೆದಿದ್ದಾರೆ. ಇದು ಅವರ ಮೂರನೇ ಪುಸ್ತಕವಾಗಿದೆ.
“ಭಾರತದ ರಾಜಕೀಯ ನಾಯಕತ್ವ ಮತ್ತು ಜನರನ್ನು ರಕ್ಷಿಸುವಲ್ಲಿ ಸರ್ಕಾರದ ಉದ್ದೇಶವನ್ನು ಪ್ರಶ್ನಿಸಿದ ಮಾಧ್ಯಮಗಳು ಮತ್ತು ರಾಜಕೀಯ ನಾಯಕರ ಬಗ್ಗೆ ಪುಸ್ತಕದಲ್ಲಿ ಉಲ್ಲೇಖ ಮಾಡಿದ್ದೇನೆ” ಎಂದು ಪ್ರಿಯಮ್ ತಮ್ಮ ಪುಸ್ತಕದ ಬಗ್ಗೆ ಮಾತನಾಡುತ್ತಾ ಹೇಳಿದರು.
ಮೋದಿಯವರ ಜನತಾ ಕರ್ಫ್ಯೂ ಕರೆಯಿಂದ ಹಿಡಿದು ಕೋವಿಡ್ ವಿರುದ್ಧ ಅವರು ಜನರನ್ನು ಜಾಗೃತಗೊಳಿಸಲು ತೆಗೆದುಕೊಂಡ ಪ್ರತಿ ಕ್ರಮಗಳ ಬಗ್ಗೆ ಪುಸ್ತಕದಲ್ಲಿ ವಿವರಿಸಲಾಗಿದೆ. ಮನ್ಸುಖ್ ಮಾಂಡವಿಯಾ ಅವರ ಬಗ್ಗೆಯೂ ಪುಸ್ತಕದಲ್ಲಿ ವಿವರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.