ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಫ್ಘಾನಿಸ್ಥಾನದ ಸಿಖ್ ಮತ್ತು ಹಿಂದೂ ಸಮುದಾಯದ ಮುಖಂಡರು ಮತ್ತು ಸದಸ್ಯರನ್ನು ಶೀಘ್ರದಲ್ಲೇ ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ
ಅಫ್ಘಾನಿಸ್ತಾನದ ಅನೇಕ ಅಲ್ಪಸಂಖ್ಯಾತರಿಗೆ ಭಾರತವು ಎರಡನೇ ಮನೆಯಾಗಿದೆ, ವಿಶೇಷವಾಗಿ ಕಳೆದ ಆಗಸ್ಟ್ನಲ್ಲಿ ತಾಲಿಬಾನ್ ಆ ದೇಶವನ್ನು ಸ್ವಾಧೀನಪಡಿಸಿಕೊಂಡ ನಂತರ ಅವರು ಭಾರತವನ್ನೇ ಆಶ್ರಯಿಸಿದ್ದಾರೆ. ಕಳೆದ ವರ್ಷ ಆಪರೇಷನ್ ದೇವಿ ಶಕ್ತಿ ಅಡಿಯಲ್ಲಿ, ಭಾರತವು ನೂರಾರು ಭಾರತೀಯ ಪ್ರಜೆಗಳನ್ನು ಮತ್ತು ಆಫ್ಘನ್ ಅಲ್ಪಸಂಖ್ಯಾತ ಸಮುದಾಯದ ಸದಸ್ಯರನ್ನು ಭಾರತಕ್ಕೆ ಕರೆ ತಂದಿದೆ.
ಭಾರತದಲ್ಲಿ ಅಫ್ಘಾನ್ ಅಲ್ಪಸಂಖ್ಯಾತ ಸಮುದಾಯವು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಹೀಗಾಗು ಭಾರತ ಸರ್ಕಾರದೊಂದಿಗೆ ಈ ಬಗ್ಗೆ ವಿಷಯ ಪ್ರಸ್ತಾಪಿಸಲು ಬಯಸುತ್ತಿದ್ದಾರೆ.
ಪ್ರಧಾನಿ ಮೋದಿಯವರಿಗೆ ಇಂಡಿಯನ್ ವರ್ಲ್ಡ್ ಫೋರಂ ಅಧ್ಯಕ್ಷ ಚಾಂಧೋಕ್ ಅವರು ಪತ್ರ ಬರೆದು, ಅಫ್ಘಾನ್ ಅಲ್ಪಸಂಖ್ಯಾತರು ಭಾರತೀಯ ಪೌರತ್ವ, ವೀಸಾಗಳು ಮತ್ತು ಅಫ್ಘಾನಿಸ್ತಾನದಲ್ಲಿನ ಗುರುದ್ವಾರಗಳು ಮತ್ತು ದೇವಾಲಯಗಳ ನಿರ್ವಹಣೆಯಂತಹ ವಿಷಯಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಬಯಸುತ್ತಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.