ನವದೆಹಲಿ: ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, “ಜನ್ಮ ದಿನಾಚರಣೆಯಂದು ಛತ್ರಪತಿ ಶಿವಾಜಿ ಮಹಾರಾಜರಿಗೆ ತಲೆಬಾಗುತ್ತೇನೆ. ಅವರ ಅತ್ಯುತ್ತಮ ನಾಯಕತ್ವ ಮತ್ತು ಸಮಾಜ ಕಲ್ಯಾಣಗಳ ಹಲವು ಅಧ್ಯಯನಗಳು ಹಲವು ತಲೆಮಾರುಗಳಿಗೆ ಸ್ಪೂರ್ತಿದಾಯಕವಾಗಿದೆ. ಸತ್ಯ ಮತ್ತು ನ್ಯಾಯದ ಪರ ನಿಲ್ಲುವ ಸಂದರ್ಭದಲ್ಲಿ ಅವರೆಂದು ರಾಜಿ ಮಾಡಿಕೊಂಡಿರಲಿಲ್ಲ. ತ್ಯಾಂಚಿ ಸ್ವಪ್ನೇ ಪೂರ್ಣ ಕರನ್ಯಾಸತಿ ಆಮ್ಹಿ ಬದ್ಧ ಆಹಹೋತ್” ಎಂದಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುತ್ತದೆ. ಅಪ್ರತಿಮ ಯೋಧರೆನ್ನಿಸಿಕೊಂಡು ಹದಿಹರೆಯದಲ್ಲಿಯೇ ಯುದ್ಧಭೂಮಿಯಲ್ಲಿ ಪರಾಕ್ರಮ ಪ್ರದರ್ಶಿಸಿ ಮರಾಠ ರಾಜ್ಯ ಸ್ಥಾಪಿಸಿದ ಶಿವಾಜಿ ಮಹಾರಾಜ ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕೆ ಸ್ಪೂರ್ತಿ ತುಂಬಿದವರು. ಹಿಂದೂಗಳನ್ನು ಪರಕೀಯರ ದಾಳಿಯಿಂದ ರಕ್ಷಿಸುವಲ್ಲಿ ಅವರು ಮಾಡಿದ ಅಪ್ರತಿಮ ಸಾಹಸ ಅವರನ್ನು ಹಿಂದೂ ಹೃದಯ ಸಾಮ್ರಾಟನಾಗಿ ಅಜರಾಮರಗೊಳಿಸಿದೆ.
छत्रपती शिवाजी महाराजांच्या जयंतीनिमित्त मी त्यांना नमन करतो. त्यांचे सर्वोत्कृष्ट नेतृत्व आणि समाज कल्याणासाठीचा आग्रह अनेक पिढ्यांसाठी प्रेरक ठरला आहे .सत्य आणि न्याय या मूल्यांशी त्यांनी तडजोड केली नाही. त्यांची स्वप्ने पूर्ण करण्यासाठी आम्ही कटिबद्ध आहोत. pic.twitter.com/alPjOrLdT4
— Narendra Modi (@narendramodi) February 19, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.