ನವದೆಹಲಿ: ನಗರಗಳನ್ನು ಸ್ವಚ್ಛ ಮತ್ತು ಮಾಲಿನ್ಯ ಮುಕ್ತಗೊಳಿಸಲು ಬಯೋ ಸಿಎನ್ಜಿ ಪ್ಲಾಂಟ್ಗಳು ಸಹಾಯ ಮಾಡುತ್ತವೆ ಮತ್ತು ಸರ್ಕಾರವು ಮುಂದಿನ ಎರಡು ವರ್ಷಗಳಲ್ಲಿ 75 ದೊಡ್ಡ ಮುನ್ಸಿಪಲ್ ಕಾರ್ಪೊರೇಷನ್ಗಳಲ್ಲಿ ಬಯೋ-ಸಿಎನ್ಜಿ ಘಟಕಗಳನ್ನು ನಿರ್ಮಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇಂದು ಮಧ್ಯಾಹ್ನ ಮಧ್ಯಪ್ರದೇಶದ ಇಂದೋರ್ನಲ್ಲಿ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಗೋಬರ್-ಧನ್ (ಬಯೋ-ಸಿಎನ್ಜಿ) ಘಟಕವನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಲಕ್ಷಾಂತರ ಟನ್ಗಳಷ್ಟು ಕಸ ಸಾವಿರಾರು ಎಕರೆ ಭೂಮಿಯನ್ನು ಆಕ್ರಮಿಸಿಕೊಂಡಿದೆ. ಇದು ವಾಯು ಮತ್ತು ಜಲ ಮಾಲಿನ್ಯಕ್ಕೆ ಕಾರಣವಾಗುತ್ತದೆ. ಸ್ವಚ್ಛ ಭಾರತ್ ಮಿಷನ್ನ ಎರಡನೇ ಹಂತದಲ್ಲಿ ಈ ಸಮಸ್ಯೆಯನ್ನು ಎದುರಿಸಲು ಕೆಲಸ ಮಾಡಲಾಗುತ್ತಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ನಾಗರಿಕ ಕರ್ತವ್ಯ ಪ್ರಜ್ಞೆ ಮತ್ತು ಕಠಿಣ ಪರಿಶ್ರಮದಿಂದ ಇಂದೋರ್ ಇದು ಸ್ವಚ್ಛ ನಗರ ಎಂಬ ಸ್ಥಾನವನ್ನು ಪಡೆದಿದೆ ಎಂದು ಮೋದಿ, ಬಯೋ ಸಿಎನ್ಜಿ ಘಟಕಕ್ಕಾಗಿ ಅಲ್ಲಿನ ಜನರಿಗೆ ಅಭಿನಂದನೆ ತಿಳಿಸಿದರು.
ತ್ಯಾಜ್ಯದಿಂದ ಸಂಪತ್ತು ಮತ್ತು ನೈರ್ಮಲ್ಯ ಕ್ಷೇತ್ರದಲ್ಲಿ ಆವಿಷ್ಕಾರದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಉದ್ದೇಶದಿಂದ ಇಂದೋರ್ನಲ್ಲಿ ದಿನಕ್ಕೆ 550 ಮೆಟ್ರಿಕ್ ಟನ್ ಸಾಮರ್ಥ್ಯದ ಬಯೋ ಸಿಎನ್ಜಿ ಸ್ಥಾವರವನ್ನು ಸ್ಥಾಪಿಸಲಾಗಿದೆ.
ವೇಸ್ಟ್ ಟು ವೆಲ್ತ್ ಎಂಬ ಪ್ರಧಾನಿಯ ಮಂತ್ರವನ್ನು ಸಂಪೂರ್ಣವಾಗಿ ಜಾರಿಗೆ ತರಲು ಮಧ್ಯಪ್ರದೇಶ ಪ್ರಯತ್ನಿಸುತ್ತಿದೆ. ಇದಕ್ಕೆ ಉದಾಹರಣೆ ಇಂದೋರ್ನ ಗೋಬರ್-ಧನ್ ಬಯೋ ಸಿಎನ್ಜಿ ಪ್ಲಾಂಟ್ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಇಂದೋರ್ನ ಈ ಬಯೋ- ಸಿಎನ್ಜಿ ಘಟಕಕ್ಕ ದಿನಕ್ಕೆ 550 ಟನ್ಗಳಷ್ಟು ಹಸಿ ಸಾವಯವ ತ್ಯಾಜ್ಯವನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು ದಿನಕ್ಕೆ ಸುಮಾರು 17 ಸಾವಿರ ಕಿಲೋಗ್ರಾಂ ಸಿಎನ್ಜಿ ಮತ್ತು ದಿನಕ್ಕೆ 100 ಟನ್ ಸಾವಯವ ಗೊಬ್ಬರವನ್ನು ಉತ್ಪಾದಿಸುವ ನಿರೀಕ್ಷೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.