ಬೆಂಗಳೂರು: ಮಾನವೀಯತೆ ಎನ್ನುವುದು ಕಾರ್ಮೋಡಗಳ ನಡುವೆ ಇರುವ ಬೆಳ್ಳಿ ರೇಖೆಯಂತೆ. ಮಾನವೀಯತೆ ಹೆಚ್ಚಿದಷ್ಟು ವಿಶ್ವ ಸಹನೀಯವಾದ ಸ್ಥಳವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಇಂದು ಕೋವಿಡ್ 19 ಸಂದರ್ಭದಲ್ಲಿ ಅದರ ವಿರುದ್ಧದ ಹೋರಾಟದ ಕಥೆಗಳ ಬಗ್ಗೆ ಅದಮ್ಯ ಚೇತನ ಹೊರತಂದಿರುವ ಕಾರ್ಮೋಡಗಳ ನಡುವೆ ಪುಸಕ್ತವನ್ನು ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು.
ಪ್ರತಿ ವಿಚಾರದಲ್ಲಿಯೂ ಮಾನವೀಯತೆಗೆ ಪ್ರಾಮುಖ್ಯತೆ ನೀಡಬೇಕು ಎಂದ ಮುಖ್ಯಮಂತ್ರಿಗಳು, ದು:ಖದಲ್ಲಿಯೂ ಸಾಧಿಸಿ ಜಯಿಸಬಹುದು ಎಂಬ ಪಾಠವನ್ನು ಆಪತ್ಕಾಲ ನಮಗೆ ಕಲಿಸುತ್ತದೆ. ಸಂಪೂರ್ಣವಾಗಿ ನಾಶವಾಗುವ ಸಂದರ್ಭಗಳಲ್ಲಿಯೂ ಮನುಕುಲ ಹಾಗೂ ಸಂಸ್ಕೃತಿಗಳು ಎದ್ದುನಿಂತಿರುವುದು ಮನುಷ್ಯನ ಸಹಜ ಗುಣ. ಅದಕ್ಕೆ ಮಾನವನ ಹೊಂದಿಕೊಳ್ಳುವ ಗುಣವೇ ಕಾರಣ. ಇದೇ ಅವನನ್ನು ಎಂಥಹ ಸಂಕಷ್ಟದಲ್ಲಿಯೂ ಪಾರುಮಾಡಿರುವ ಗುಣ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
ಕೋವಿಡ್ ಸಂದರ್ಭದಲ್ಲಿ ಎಲೆಮರೆಕಾಯಿಯಂತೆ ಜನರ ಸಹಾಯಕ್ಕೆ ಅನೇಕರು ಮುಂದಾಗಿದ್ದರು. ಅವರ ಪೈಕಿ ಹಲವು ಕಥೆಗಳನ್ನು ಪುಸಕ್ತದಲ್ಲಿ ದಾಖಲಿಸಿರುವುದು ಶ್ಲಾಘನೀಯ. ಸಂಕಷ್ಟದ ಸಮಯದಲ್ಲಿ ಸಮಾಜ ಸ್ಪಂದಿಸಬೇಕು. ಈ ಕಾರಣಕ್ಕಾಗಿಯೇ ನಾಗರಿಕ ಸಂಘಗಳು ಹುಟ್ಟಿಕೊಳ್ಳಬೇಕು. ಜನಾಭಿಪ್ರಾಯ ರೂಪಿಸಲು, ನಾಗರಿಕ ಸಂಘಗಳ ಅಗತ್ಯವಿದೆ. ಅದಮ್ಯ ಚೇತನ ಭವಿಷ್ಯದ ನಾಗರಿಕ ಸಂಘವಿದ್ದಂತೆ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.