ನವದೆಹಲಿ: ಭಜರಂಗದಳದ ಕಾರ್ಯಕರ್ತನ ಹತ್ಯೆಯ ಹಿನ್ನೆಲೆಯಲ್ಲಿ ಸೋಮವಾರ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಭಾನುವಾರ ತಡರಾತ್ರಿ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ 26 ವರ್ಷದ ಹರ್ಷ ಎಂಬುವವರನ್ನು ಹತ್ಯೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಆರ್ ಮಾತನಾಡಿ, “ಸಿಆರ್ಪಿಸಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಒಟ್ಟಾರೆ ಪರಿಸ್ಥಿತಿ ಶಾಂತಿಯುತವಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸ್ಥಳೀಯ ಪೊಲೀಸರು ಮತ್ತು ಆರ್ಎಎಫ್ಗಳನ್ನು ನಿಯೋಜಿಸಲಾಗಿದೆ”ಎಂದಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ನಗರ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮೃತನ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಸಚಿವರು, ಶೀಘ್ರ ಕ್ರಮಕೈಗೊಳ್ಳುವ ಭರವಸೆ ನೀಡಿದರು.
ಸಚಿವರು ಹಿರಿಯ ಪೊಲೀಸ್ ಮತ್ತು ಜಿಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ “ನಮಗೆ ಈಗಾಗಲೇ ದುಷ್ಕರ್ಮಿಗಳ ಸುಳಿವು ಸಿಕ್ಕಿದೆ, ಆದರೆ ತನಿಖೆ ನಡೆಯುತ್ತಿರುವುದರಿಂದ ನಾನು ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ. ಕೃತ್ಯ ಯಾರು ಮಾಡಿದ್ದಾರೆಂದು ನಮಗೆ ತಿಳಿದಿದೆ ಮತ್ತು ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು. ಸುಮಾರು ನಾಲ್ಕೈದು ಜನ ಕೃತ್ಯದಲ್ಲಿ ಭಾಗಿಯಾಗಿದ್ದಾರೆ’ ಎಂದರು.
ಯುವಕನನ್ನು ಮುಸ್ಲಿಂ ಗೂಂಡಾಗಳು ಹತ್ಯೆ ಮಾಡಿದ್ದಾರೆ, ನಾನು ಈಗ ಶಿವಮೊಗ್ಗಕ್ಕೆ ಪರಿಸ್ಥಿತಿಯನ್ನು ವಿಶ್ಲೇಷಿಸಲು ಹೋಗುತ್ತಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.