ನವದೆಹಲಿ: ಡಿಜಿಟಲ್ ವಿಶ್ವವಿದ್ಯಾನಿಲಯವು ಭಾರತದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿನ ಅಭೂತಪೂರ್ವ ಹೆಜ್ಜೆಯಾಗಿದ್ದು, ದೇಶದಲ್ಲಿ ಸೀಟುಗಳ ಕೊರತೆಯ ಸಮಸ್ಯೆಯನ್ನು ಕೊನೆಗೊಳಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಕೇಂದ್ರ ಬಜೆಟ್ 2022 ರಲ್ಲಿ ಮಾಡಲಾದ ಘೋಷಣೆಗಳ ಅನುಷ್ಠಾನದ ಕುರಿತು ಶಿಕ್ಷಣ ಸಚಿವಾಲಯ ಆಯೋಜಿಸಿದ್ದ ವೆಬ್ನಾರ್ನ ಸಮಗ್ರ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಮೋದಿ ಈ ಹೇಳಿಕೆಗಳನ್ನು ನೀಡಿದರು.
ಯುವ ಪೀಳಿಗೆಯನ್ನು ಭಾರತದ ಭವಿಷ್ಯ ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಭವಿಷ್ಯದ ನಾಯಕರನ್ನು ಸಬಲೀಕರಣಗೊಳಿಸಲು ಕರೆ ನೀಡಿದರು. “ನಮ್ಮ ಯುವ ಪೀಳಿಗೆ ದೇಶದ ಭವಿಷ್ಯದ ನಾಯಕರು. ಆದ್ದರಿಂದ ಇಂದಿನ ಯುವ ಪೀಳಿಗೆಯನ್ನು ಸಶಕ್ತಗೊಳಿಸುವುದು ಎಂದರೆ ಭಾರತದ ಭವಿಷ್ಯವನ್ನು ಸಶಕ್ತಗೊಳಿಸುವುದು” ಎಂದರು. ಮೋದಿ ಅವರು ಕೇಂದ್ರ ಬಜೆಟ್ 2022 ರ ಶಿಕ್ಷಣ ಕ್ಷೇತ್ರದ ಮೇಲೆ ಸಕಾರಾತ್ಮಕ ಪರಿಣಾಮವನ್ನು ಒತ್ತಿ ಹೇಳಿದರು.
“2022 ರ ಕೇಂದ್ರ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ 5 ವಿಷಯಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮೊದಲನೆಯದು ಗುಣಮಟ್ಟದ ಶಿಕ್ಷಣದ ಸಾರ್ವತ್ರೀಕರಣ, ಎರಡನೆಯದು ಕೌಶಲ್ಯ ಅಭಿವೃದ್ಧಿ, ಮೂರನೆಯದು ನಗರ ಯೋಜನೆ ಮತ್ತು ವಿನ್ಯಾಸ. ನಾಲ್ಕನೆಯದು ಅಂತರಾಷ್ಟ್ರೀಕರಣ – ಭಾರತದಲ್ಲಿ ವಿಶ್ವ ದರ್ಜೆಯ ವಿದೇಶಿ ವಿಶ್ವವಿದ್ಯಾಲಯಗಳು ಮತ್ತು ಐದನೆಯದು AVGC- ಆನಿಮೇಷನ್ ವಿಷುಯಲ್ ಎಫೆಕ್ಟ್ಸ್ ಗೇಮಿಂಗ್ ಕಾಮಿಕ್” ಎಂದರು.
ಕೇಂದ್ರ ಬಜೆಟ್ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಸಹಾಯ ಮಾಡುತ್ತದೆ ಎಂದು ಒತ್ತಿ ಹೇಳಿದ ಪ್ರಧಾನಿ, “ರಾಷ್ಟ್ರೀಯ ಡಿಜಿಟಲ್ ವಿಶ್ವವಿದ್ಯಾಲಯವು ಭಾರತದಲ್ಲಿ ಸೀಟುಗಳ ಕೊರತೆಯ ಸಮಸ್ಯೆಯನ್ನು ಪರಿಹರಿಸುತ್ತದೆ. ಅನಿಯಮಿತ ಸೀಟುಗಳು ಲಭ್ಯ ಆಗಮಿವೆ. ಡಿಜಿಟಲ್ ವಿಶ್ವವಿದ್ಯಾನಿಲಯವು ಸಾಧ್ಯವಾದಷ್ಟು ಬೇಗ ಪ್ರಾರಂಭವಾಗುವುದನ್ನು ಖಚಿತಪಡಿಸಿಕೊಳ್ಳಲು ನಾನು ಎಲ್ಲರನ್ನು ಕೋರುತ್ತೇನೆ” ಎಂದಿದ್ದಾರೆ.
ಶಿಕ್ಷಣ ಮತ್ತು ಕೌಶಲ್ಯ ವಲಯದ ಕುರಿತು ವೆಬ್ನಾರ್ ಅನ್ನು ಆಯೋಜಿಸುತ್ತಿರುವ ಶಿಕ್ಷಣ ಸಚಿವಾಲಯವು ಪ್ರಸ್ತುತತೆಯ ವಿವಿಧ ವಿಷಯಗಳ ಕುರಿತು ಅಧಿವೇಶನಗಳನ್ನು ನಡೆಸುತ್ತದೆ ಮತ್ತು ವಿವಿಧ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳ ಸರ್ಕಾರಿ ಅಧಿಕಾರಿಗಳು, ಉದ್ಯಮ ಪ್ರತಿನಿಧಿಗಳು, ಕೌಶಲ್ಯ ಅಭಿವೃದ್ಧಿ ಸಂಸ್ಥೆಗಳು, ಶಿಕ್ಷಣ ತಜ್ಞರು, ವಿದ್ಯಾರ್ಥಿಗಳು ಮತ್ತು ಇತರ ತಜ್ಞರು ಇದರಲ್ಲಿ ಭಾಗಿಯಾಗಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.