ರಾಂಚಿ: ಮೇವು ಹಗರಣದ ಅಂತಿಮ ಮತ್ತು ಐದನೇ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ಗೆ ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ ಸೋಮವಾರ 5 ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.
ಜಾರ್ಖಂಡ್ನ ಡೊರಾಂಡಾ ಖಜಾನೆಯಿಂದ 139 ಕೋಟಿಗೂ ಹೆಚ್ಚು ಮೊತ್ತವನ್ನು ಲಪಟಾಯಿಸಿದ ಆರೋಪ ಅವರ ಮೇಲೆ ಇದೆ. ವಿಶೇಷ ಸಿಬಿಐ ನ್ಯಾಯಾಲಯವು ಕಳೆದ ವಾರ ಈ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ಘೋಷಿಸಿತ್ತು.
ಲಾಲೂ ಅವರಲ್ಲದೆ, ಮಾಜಿ ಸಂಸದ ಜಗದೀಶ್ ಶರ್ಮಾ, ಅಂದಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಅಧ್ಯಕ್ಷ ಧ್ರುವ ಭಗತ್, ಪಶುಸಂಗೋಪನಾ ಕಾರ್ಯದರ್ಶಿ ಬೆಕ್ ಜೂಲಿಯಸ್ ಮತ್ತು ಪಶುಸಂಗೋಪನಾ ಸಹಾಯಕ ನಿರ್ದೇಶಕ ಡಾ.ಕೆ.ಎಂ.ಪ್ರಸಾದ್ ಕೂ ಪ್ರಮುಖ ಆರೋಪಿಗಳು.
ವಿಶೇಷ ನ್ಯಾಯಾಲಯವು ಇತರ 24 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿದೆ.
1996ರ ಜನವರಿಯಲ್ಲಿ ಪಶುಸಂಗೋಪನಾ ಇಲಾಖೆ ಮೇಲೆ ದಾಳಿ ನಡೆಸಿದ ಬಳಿಕ ಮೇವು ಹಗರಣ ಬೆಳಕಿಗೆ ಬಂದಿತ್ತು. ಸಿಬಿಐ ಜೂನ್ 1997 ರಲ್ಲಿ ಲಾಲೂ ಪ್ರಸಾದ್ ಅವರನ್ನು ಆರೋಪಿ ಎಂದು ಹೆಸರಿಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.