ಲಕ್ನೋ: ಪ್ರಧಾನಿ ನರೇಂದ್ರ ಮೋದಿಯವರು ತಾವೆಷ್ಟು ಸರಳ ವ್ಯಕ್ತಿ ಎಂಬುದನ್ನು ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ. ಭಾನುವಾರ ಉತ್ತರ ಪ್ರದೇಶದ ಉನ್ನಾವೊದಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಉನ್ನಾವೊ ಜಿಲ್ಲಾಧ್ಯಕ್ಷ ಅವಧೇಶ್ ಕಟಿಯಾರ್ ಅವರು ಪ್ರಧಾನಿಯವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ, ಆದರೆ ಆ ರೀತಿ ಮಾಡಬಾರದು ಎಂದು ಹೇಳಿದ ಮೋದಿ ಪ್ರತಿಯಾಗಿ ಕಟಿಯಾರ್ ಪಾದಗಳಿಗೆಯೇ ನಮಸ್ಕರಿಸಿದ್ದಾರೆ.
ಬಿಜೆಪಿ ನಾಯಕ ಸಂಬಿತ್ ಪಾತ್ರಾ ಅವರು ಹಂಚಿಕೊಂಡಿರುವ ವೀಡಿಯೊದಲ್ಲಿ, ಕಟಿಯಾರ್ ಅವರಿಗೆ ಪಾದಗಳನ್ನು ಮುಟ್ಟಬೇಡಿ ಎಂದು ಪ್ರಧಾನಿ ವಿವರಿಸುತ್ತಿರುವುದನ್ನು ಕಾಣಬಹುದು ಮತ್ತು ಕಟಿಯಾರ್ ಅವರ ಪಾದಗಳನ್ನು ಮುಟ್ಟಿ ಮೋದಿ ಪ್ರತಿ ಗೌರವ ಸಲ್ಲಿಸಿದ್ದಾರೆ.
ಎಂ ಮೋದಿ ಉತ್ತರ ಪ್ರದೇಶ ಚುನಾವಣೆಯ ಸಮಾವೇಶಕ್ಕೆ ಆಗಮಿಸುತ್ತಿದ್ದಂತೆ ಬಿಜೆಪಿಯ ಯುಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಮತ್ತು ಬಿಜೆಪಿಯ ಉನ್ನಾವೋ ಜಿಲ್ಲಾಧ್ಯಕ್ಷ ಅವಧೇಶ್ ಕಟಿಯಾರ್ ಅವರು ಶ್ರೀರಾಮನ ವಿಗ್ರಹವನ್ನು ಉಡುಗೊರೆಯಾಗಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಈ ಸನ್ನಿವೇಶ ನಡೆದಿದೆ.
ಅವಧೇಶ್ ಕಟಿಯಾರ್ ಅವರನ್ನು ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಬಿಜೆಪಿಯಿಂದ ಉನ್ನಾವ್ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಯಿತು ಮತ್ತು ಮೊದಲು ಅವರು ಜಿಲ್ಲೆಯಲ್ಲಿ ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಉನ್ನಾವೊ ಜಿಲ್ಲೆಯು ಆರು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಅಲ್ಲಿ ಫೆಬ್ರವರಿ 23 ರಂದು ಯುಪಿ ಚುನಾವಣೆಯ ನಾಲ್ಕನೇ ಹಂತದಲ್ಲಿ ಮತದಾನವನ್ನು ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ 3 ನೇ ಹಂತದ ಮತದಾನವು ಫೆಬ್ರವರಿ 20ರಂದು ನಡೆಯಿತು.
"प्रधानसेवक" pic.twitter.com/8BPL9Xolbe
— Sambit Patra (@sambitswaraj) February 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.