ನವದೆಹಲಿ: ಮಣಿಪುರವು ಪೂರ್ವ ಏಷ್ಯಾ ರಾಷ್ಟ್ರಗಳ ಹೆಬ್ಬಾಗಿಲು ಆಗಲಿದ್ದು, ಇದಕ್ಕಾಗಿ ಈಶಾನ್ಯ ರಾಜ್ಯದಲ್ಲಿ ರೈಲ್ವೆ ಸಂಪರ್ಕವನ್ನು ವಿಸ್ತರಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವ್ಯಾಪಾರ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಮೂಲಕ ಭಾರತ ಮತ್ತು ಪೂರ್ವ ಏಷ್ಯಾದ ದೇಶಗಳ ನಡುವಿನ ಸುಲಭ ಸಂಪರ್ಕದ ಮೂಲಕ ಮಣಿಪುರವನ್ನು ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ನೊಂದಿಗೆ ಜೋಡಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.
ಮಣಿಪುರ ರಾಜಧಾನಿಯನ್ನು ಬ್ರಾಡ್ ಗೇಜ್ ರೈಲ್ವೆ ಜಾಲದಿಂದ ಜೋಡಿಸುವ ದಿನಗಳು ದೂರವಿಲ್ಲ. ಪ್ರಸ್ತುತ, ಮಣಿಪುರದಲ್ಲಿ 40 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದು ಇಂಫಾಲ್ನಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮೋದಿ ಹೇಳಿದರು.
ಮಣಿಪುರದಲ್ಲಿ ಭಾರತದ ಮೊದಲ ಕ್ರೀಡಾ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಈಗಾಗಲೇ ಪ್ರಾರಂಭಿಸಿದೆ ಎಂದ ಮೋದಿ, “ಬಿಜೆಪಿ ಸರ್ಕಾರವು ಈಗಾಗಲೇ ರಾಜ್ಯದಲ್ಲಿ ವಿಶಿಷ್ಟವಾದ ಕ್ರೀಡಾ ಸಂಸ್ಕೃತಿಯನ್ನು ಸೃಷ್ಟಿಸಿದೆ ಮತ್ತು ಮಣಿಪುರವು ದೇಶದ ಕ್ರೀಡಾ ಕೇಂದ್ರಗಳಲ್ಲಿ ಒಂದಾಗಲಿದೆ” ಎಂದು ಹೇಳಿದರು.
ಬಿಜೆಪಿ ಸರ್ಕಾರವು ಕಳೆದ ಐದು ವರ್ಷಗಳಲ್ಲಿ ಮಣಿಪುರದಲ್ಲಿ ಬಂದ್ ಮತ್ತು ಹಿಂಸಾಚಾರ ಸಂಸ್ಕೃತಿಯನ್ನು ತೊಡೆದುಹಾಕಿದೆ ಎಂದಿದ್ದಾರೆ.
ಮಣಿಪುರದ ಜನರ ಜನಸಂಖ್ಯೆ, ಸಂಸ್ಕೃತಿ ಮತ್ತು ಸಂಪ್ರದಾಯವನ್ನು ರಕ್ಷಿಸಲು, ರಾಜ್ಯದ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ಸಲುವಾಗಿ ಕೇಂದ್ರ ಸರ್ಕಾರ ಇನ್ನರ್ ಲೈನ್ ಪರ್ಮಿಟ್ ಅನ್ನು ಘೋಷಿಸಿದೆ ಎಂದು ಮೋದಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.