ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಎಲ್ಪಿಜಿ ವಿತರಣಾ ವ್ಯವಸ್ಥೆಯ ಮೂಲಕ ಸುಮಾರು 1 ಲಕ್ಷ ಜನರು ಉದ್ಯೋಗ ಪಡೆದಿದ್ದಾರೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಖಾತೆ ಕೇಂದ್ರ ಸಚಿವ ರಾಮೇಶ್ವರ್ ತೇಲಿ ಬುಧವಾರ ತಿಳಿದ್ದಾರೆ.
ಅಭಿವೃದ್ಧಿಯನ್ನು ವೇಗಗೊಳಿಸಲು ಮತ್ತು ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಪರಿಣಾಮಕಾರಿಯಾಗಿಸಲು ಆಯೋಜಿಸಲಾದ ಬಜೆಟ್ ನಂತರದ ವೆಬ್ನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಸಚಿವರು, “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ನ ಭಾಗವಾಗಿ ಕೋವಿಡ್-19 ಸಮಯದಲ್ಲಿ ಉಜ್ವಲ ಯೋಜನೆ ಫಲಾನುಭವಿಗಳಿಗೆ 14 ಕೋಟಿಗೂ ಹೆಚ್ಚು ಉಚಿತ ಎಲ್ಪಿಜಿ ಮರುಪೂರಣಗಳನ್ನು ಒದಗಿಸಲಾಗಿದೆ” ಎಂದರು.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಉಜ್ವಲ ಯೋಜನೆಯನ್ನು ಮನೆ-ಮನೆಗೆ ಯೋಜನೆ ಮಾಡುವ ಅಗತ್ಯತೆಯ ಬಗ್ಗೆ ಮಾತನಾಡಿದರು.
“ಯೋಜನೆಯನ್ನು ಪರಿಣಾಮಕಾರಿಯಾಗಿಸಲು, ಸ್ವ-ಸಹಾಯ ಗುಂಪುಗಳನ್ನು ಸೇರಿಸಲು ವಿಶೇಷ ಗಮನವನ್ನು ನೀಡಬೇಕು, ಮರುಪೂರಣಕ್ಕಾಗಿ ಮೈಕ್ರೋ-ಫೈನಾನ್ಸ್ ಆಗಿ ಕಾರ್ಯನಿರ್ವಹಿಸಲು ಎಲ್ಪಿಜಿ ಬ್ಯಾಂಕ್ ರಚನೆ, ಮೈಕ್ರೋ ವಿತರಕರ ಜಾಲವನ್ನು ಸ್ಥಾಪಿಸುವುದು ಜೊತೆಗೆ ಅಸ್ತಿತ್ವದಲ್ಲಿರುವ ಸಾಮಾಜಿಕ ನೆಟ್ವರ್ಕ್ ಮತ್ತು ಸಾಂಸ್ಥಿಕ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳುವುದು ಮರುಪೂರಣ ಮಾಡಲು ಗ್ರಾಹಕರನ್ನು ಆಕರ್ಷಿಸುತ್ತದೆ” ಎಂದು ಜೈನ್ ಹೇಳಿದರು.
ವೆಬಿನಾರ್ನಲ್ಲಿ ತೈಲ ಮಾರುಕಟ್ಟೆ ಕಂಪನಿಗಳು, ವಿತರಕರು ಮತ್ತು ಸಿಲಿಂಡರ್ ತಯಾರಕರ ಪ್ರತಿನಿಧಿಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.