ನವದೆಹಲಿ: ರಷ್ಯಾ ʼಮಿಲಿಟರಿ ಕಾರ್ಯಾಚರಣೆʼಯನ್ನು ಘೋಷಿಸಿದ ಹಿನ್ನೆಲೆಯಲ್ಲಿ ಉಕ್ರೇನ್ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಹೀಗಾಗಿ ಭಾರತೀಯರನ್ನು ತವರಿಗೆ ಕರೆತರಲು ಉಕ್ರೇನ್ಗೆ ಹಾರಿದ ಏರ್ ಇಂಡಿಯಾ ವಿಮಾನವು ದೆಹಲಿಗೆ ವಾಪಾಸ್ಸಾಗಿದೆ.
ರಷ್ಯಾದೊಂದಿಗಿನ ಸಂಘರ್ಷದ ನಡುವೆ ಸಾವಿರಾರು ಭಾರತೀಯರು ಉಕ್ರೇನ್ನಿಂದ ಸ್ವದೇಶಕ್ಕೆ ಮರಳಲು ಕಾಯುತ್ತಿದ್ದಾರೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಬೆಳಿಗ್ಗೆ ರಷ್ಯಾದ ವಿಶೇಷ ಪಡೆಗಳಿಗೆ ಉಕ್ರೇನ್ನಲ್ಲಿ ಎರಡು ಪ್ರತ್ಯೇಕತಾವಾದಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಾರೆ, ಈ ಎರಡು ಪ್ರದೇಶಗಳನ್ನು ರಷ್ಯಾ ಸೋಮವಾರ ಸ್ವತಂತ್ರ ರಾಷ್ಟ್ರಗಳೆಂದು ಗುರುತಿಸಿದೆ.
ಉಕ್ರೇನ್ಗೆ ಹೋಗುವ ಎಲ್ಲಾ ವಿಮಾನಗಳಿಗೆ NOTAM ಅಥವಾ ಏರ್ಮೆನ್ಗಳಿಗೆ ಸೂಚನೆಯನ್ನು ಕಳುಹಿಸಿದ ನಂತರ ಏರ್ ಇಂಡಿಯಾ ವಿಮಾನವು ದೆಹಲಿಗೆ ಹಿಂತಿರುಗಲು ನಿರ್ಧರಿಸಿತು.
ಪೂರ್ವ ಉಕ್ರೇನ್ನಲ್ಲಿ ದೊಡ್ಡ ಪ್ರಮಾಣದ ಮಿಲಿಟರಿ ಕಾರ್ಯಾಚರಣೆಗಳು ಆರಂಭಗೊಂಡಿರುವುದರಿಂದ, ವಾಯುಪ್ರದೇಶವು ಅಸ್ತವ್ಯಸ್ತಗೊಳ್ಳುವುದು ಸಹಜ, ಇದರಿಂದ ವಾಣಿಜ್ಯ ವಿಮಾನಗಳು ಹೆಚ್ಚಿನ ಅಪಾಯದಲ್ಲಿರುತ್ತವೆ. ವಿಮಾನ ವಿರೋಧಿ ಕ್ಷಿಪಣಿಗಳು ದಾಳಿ ನಡೆಸುವ ಭೀತಿ ಇರುತ್ತದೆ.
ಜುಲೈ 2014 ರಲ್ಲಿ ಉಕ್ರೇನ್ನ ಸಶಸ್ತ್ರ ಪಡೆಗಳು ಮತ್ತು ರಷ್ಯಾ ಪರ ಪ್ರತ್ಯೇಕತಾವಾದಿಗಳ ನಡುವಿನ ಭಾರೀ ಕಾಳಗದ ಸಂದರ್ಭದಲ್ಲಿ ಮಲೇಷ್ಯಾ ಏರ್ಲೈನ್ಸ್ ವಿಮಾನವನ್ನು ಹೊಡೆದುರುಳಿಸಲಾಯಿತು, ಅದರಲ್ಲಿದ್ದ ಎಲ್ಲಾ 298 ಜನರು ಸಾವನ್ನಪ್ಪಿದ್ದರು. ಪೂರ್ವ ಉಕ್ರೇನ್ನಿಂದ ಉಡಾವಣೆಯಾದ ರಷ್ಯಾ ನಿರ್ಮಿತ BUK ವಿಮಾನ ವಿರೋಧಿ ಕ್ಷಿಪಣಿಯಿಂದ ವಿಮಾನವನ್ನು ಉರುಳಿಸಲಾಗಿದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಈ ಬಾರಿ ವಾಯುಮಾರ್ಗಗಳನ್ನು ಮುಚ್ಚಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.