ನವದೆಹಲಿ: ಕಳೆದ ಆರು ವರ್ಷಗಳಲ್ಲಿ ಕೃಷಿ ಬಜೆಟ್ ಹಲವು ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸ್ಮಾರ್ಟ್ ಕೃಷಿ ವಿಷಯದ ಮೇಲೆ ಕೇಂದ್ರ ಬಜೆಟ್ 2022-23 ರ ಸಕಾರಾತ್ಮಕ ಪರಿಣಾಮದ ಕುರಿತು ವೆಬ್ನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶೇಷ ಅಭಿಯಾನ ಮೂರು ಕೋಟಿ ಸಣ್ಣ ರೈತರನ್ನು ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಸೌಲಭ್ಯಗಳೊಂದಿಗೆ ಸಂಪರ್ಕಿಸಿದೆ ಎಂದು ಹೇಳಿದರು.
ಏಳು ವರ್ಷಗಳಲ್ಲಿ ರೈತರ ಕೃಷಿ ಸಾಲದಲ್ಲಿ 2.5 ಪಟ್ಟು ಏರಿಕೆಯಾಗಿದೆ ಎಂದು ಮೋದಿ ಹೇಳಿದರು.
ಮೂರು ವರ್ಷಗಳ ಹಿಂದೆ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯು ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ದೊಡ್ಡ ಬೆಂಬಲವಾಗಿದೆ. ಈ ಯೋಜನೆಯಡಿಯಲ್ಲಿ ಇದುವರೆಗೆ ಸುಮಾರು 11 ಕೋಟಿ ರೈತರಿಗೆ 1.82 ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗಿದೆ. ಕೇವಲ ಒಂದೇ ಕ್ಲಿಕ್ನಲ್ಲಿ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ರೈತರನ್ನು ನವೀನರನ್ನಾಗಿ ಮಾಡಲು ಈ ವರ್ಷದ ಬಜೆಟ್ ಹಲವಾರು ಅಂಶಗಳನ್ನು ಸೂಚಿಸಿದೆ ಎಂದ ಮೋದಿ, ಗಂಗಾ ನದಿಯ ದಡದ 5 ಕಿಮೀ ಪ್ರದೇಶದಲ್ಲಿ ನೈಸರ್ಗಿಕ ಕೃಷಿಯನ್ನು ಮಿಷನ್ ಮೋಡ್ನಲ್ಲಿ ಸಂಸ್ಕರಿಸಲು, ಕೃಷಿ ಮತ್ತು ತೋಟಗಾರಿಕೆ ರೈತರಿಗೆ ಆಧುನಿಕ ತಂತ್ರಜ್ಞಾನವನ್ನು ಒದಗಿಸಲು, ಖಾದ್ಯ ತೈಲ ಆಮದುಗಳನ್ನು ಕಡಿಮೆ ಮಾಡಲು ಎಣ್ಣೆಕಾಳುಗಳ ಬೆಳೆ ಹೆಚ್ಚಿಸುವತ್ತ ಗಮನ ಕೇಂದ್ರೀಕರಿಸಲು ಅನುವು ಮಾಡಿಕೊಟ್ಟಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.