ನವದೆಹಲಿ: ರಷ್ಯಾ-ಉಕ್ರೇನ್ ನಡುವಿನ ಉದ್ವಿಗ್ನತೆಯ ವಿಷಯದಲ್ಲಿ ಭಾರತದ ನಿಲುವು ತಟಸ್ಥವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಡಾ ರಾಜ್ಕುಮಾರ್ ರಂಜನ್ ಸಿಂಗ್ ಗುರುವಾರ ಹೇಳಿದ್ದಾರೆ.
ರಷ್ಯಾ ಉಕ್ರೇನ್ನಲ್ಲಿ ವಿಶೇಷ “ಮಿಲಿಟರಿ ಕಾರ್ಯಾಚರಣೆ” ಯನ್ನು ಪ್ರಾರಂಭಿಸಿದ್ದು, ಈಗಾಗಲೇ ದಾಳಿಗಳು ಆರಂಭಗೊಂಡಿದೆ.
“ಭಾರತದ ನಿಲುವು ತಟಸ್ಥವಾಗಿದೆ ಮತ್ತು ನಾವು ಶಾಂತಿಯುತ ಪರಿಹಾರಕ್ಕಾಗಿ ಆಶಿಸುತ್ತೇವೆ” ಎಂದು ರಾಜ್ಕುಮಾರ್ ರಂಜನ್ ಸಿಂಗ್ ಹೇಳಿದ್ದಾರೆ.
ಈ ನಡುವೆ, ಭಾರತವು ವೇಗವಾಗಿ ಬದಲಾಗುತ್ತಿರುವ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಭಾರತೀಯರ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆ ಮೇಲೆ ಗಮನ ಕೇಂದ್ರೀಕರಿಸಿದೆ.
“ನಾವು ವೇಗವಾಗಿ ಬದಲಾಗುತ್ತಿರುವ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಭಾರತೀಯರ, ವಿಶೇಷವಾಗಿ ವಿದ್ಯಾರ್ಥಿಗಳ ಸುರಕ್ಷತೆ ಮೇಲೆ ಕೇಂದ್ರೀಕರಿಸಿದ್ದೇವೆ. ನಿಯಂತ್ರಣ ಕೊಠಡಿಯನ್ನು ವಿಸ್ತರಿಸಲಾಗುತ್ತಿದೆ ಮತ್ತು ಅದು 24×7 ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದೆ” ಎಂದು ಮೂಲಗಳು ತಿಳಿಸಿವೆ.
15 ರಾಷ್ಟ್ರಗಳ ಯುಎನ್ ಸೆಕ್ಯುರಿಟಿ ಕೌನ್ಸಿಲ್ ಸಭೆಯಲ್ಲಿ, ಭಾರತವು ರಷ್ಯಾ ಮತ್ತು ಉಕ್ರೇನ್ ನಡುವಿನ ಉದ್ವಿಗ್ನತೆಯನ್ನು ತಕ್ಷಣವೇ ಶಮನ ಮಾಡುವಂತೆ ಕರೆ ನೀಡಿದೆ ಮತ್ತು ಪರಿಸ್ಥಿತಿಯು ದೊಡ್ಡ ಬಿಕ್ಕಟ್ಟಿನತ್ತ ತಿರುಗುವ ಅಪಾಯದಲ್ಲಿದೆ ಎಂದು ಎಚ್ಚರಿಸಿದೆ. ಸುಸ್ಥಿರ ರಾಜತಾಂತ್ರಿಕ ಮಾರ್ಗಗಳ ಮೂಲಕ ಚರ್ಚೆ ಆರಂಭಿಸಲು ಕರೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.