ಬೆಂಗಳೂರು: ಕೃಷಿಯಲ್ಲಿ ಡೋನ್ ತಂತ್ರಜ್ಞಾನ ಬಳಕೆ ಸೇರಿದಂತೆ ಕೀಟನಾಶಕ, ಲಘುಪೋಷಕಾಂಶಗಳು ಮತ್ತು ಬೆಳೆ ಪ್ರಚೋದಕಗಳ ಸಿಂಪಡಣೆ, ಬೆಳೆವಾರು ಬಳಕೆ ಕುರಿತು ಸಂಶೋಧನೆಯನ್ನು ನಡೆಸಲು ಅನುಕೂಲವಾಗುವಂತೆ ನೂತನ ಪದ್ಧತಿಗಳನ್ನು ಅಭಿವೃದ್ಧಿಪಡಿಸಿ, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲು ವಿಜ್ಣಾನಿಗಳ ತಂಡಗಳನ್ನು ರಚನೆ ಮಾಡಲು ಕೃಷಿ ವಿಶ್ವವಿದ್ಯಾಲಯಗಳು ಯೋಜನಾ ವರದಿ ನೀಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.
ವಿಕಾಸಸೌಧಲ್ಲಿ ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಉನ್ನತಾಧಿಕಾರದ ಸಮಿತಿಯ ಸಭೆಯನ್ನು ನಡೆಸಲಾಯಿತು. ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ತಾಂತ್ರಿಕತೆಗಳನ್ನು ರೈತರಿಗೆ ಅನುಕೂಲವಾಗುವಂತೆ ಅಭಿವೃದ್ಧಿಪಡಿಸುವ ಬಗ್ಗೆ ಸಭೆಯಲ್ಲಿ ಪರಿಶೀಲನೆ ನಡೆಸಲಾಯಿತು
ಸಭೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಸೆಕೆಂಡರಿ ಕೃಷಿಗೆ ಒತ್ತು ನೀಡುವುದರ ಜೊತೆಗೆ ಸೆಕೆಂಡರಿ ಕೃಷಿ ಕುರಿತು ರಾಜ್ಯದ ಎಲ್ಲಾ ಕೃಷಿ ವಿಶ್ವ ವಿದ್ಯಾಲಯಗಳಲ್ಲಿರುವ ನೂತನ ತಾಂತ್ರಿಕತೆಗಳನ್ನು ಒಂದೇ ಸೂರಿನಡಿ ರೈತರಿಗೆ ಲಭ್ಯವಾಗುವಂತೆ ಇನ್ಕ್ಯುಬೇಷನ್ ಕೇಂದ್ರಗಳ ಮೂಲಕ ರೈತರಿಗೆ ಮಾಹಿತಿ / ತರಬೇತಿ ನೀಡಲು ತಿಳಿಸಲಾಯಿತು ಹಾಗೂ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಲಭ್ಯವಿರುವ ರೈತಸ್ನೇಹಿ ಆದಾಯ ಹೆಚ್ಚಿಸುವ ಸಂಶೋಧನೆಗಳನ್ನು ತಂತ್ರಾಂಶದಲ್ಲಿ ಅಳವಡಿಸಿ ಎಲ್ಲರಿಗೂ ಲಭ್ಯವಾಗುವಂತೆ ಮಾಡಲು ಕರೆ ನೀಡಲಯಿತು. ಭಾಗವಹಿಸಿದ್ದ ಕೃಷಿ ಪಂಡಿತ ಪ್ರಶಸ್ತಿ ವಿಜೇತ ರೈತರಿಂದ ಸ್ಥಳೀಯವಾಗಿ ಲಭ್ಯವಿರುವ ವಿವಿಧ ಸೆಕಂಡರಿ ಕೃಷಿ ಉದ್ಯಮಗಳ ಕುರಿತು ಮಾಹಿತಿ ಪಡೆಯಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.