ನವದೆಹಲಿ: ಭಾರತವು ತನ್ನ ರಕ್ಷಣಾ ಕ್ಷೇತ್ರದಲ್ಲಿ ‘ಆತ್ಮನಿರ್ಭರತೆ’ ಸಾಧಿಸುವತ್ತ ಗಮನ ಕೇಂದ್ರೀಕರಿಸಿದೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಇತ್ತೀಚೆಗೆ ಮಂಡಿಸಿದ ಕೇಂದ್ರ ಬಜೆಟ್ನಲ್ಲಿ ಸ್ವಾವಲಂಬನೆಯ ಬದ್ಧತೆಯನ್ನು ಕಾಣಬಹುದು ಎಂದು ಹೇಳಿದರು.
‘ಆತ್ಮನಿರ್ಭರತ ಇನ್ ಡಿಫೆನ್ಸ್-ಕಾಲ್ ಟು ಆಕ್ಷನ್’ ಎಂಬ ಬಜೆಟ್ ನಂತರದ ವೆಬ್ನಾರ್ನಲ್ಲಿ ಉದ್ಘಾಟನಾ ಭಾಷಣ ಮಾಡಿದ ಮೋದಿ, ಬ್ರಿಟಿಷರ ಆಳ್ವಿಕೆಯಲ್ಲಿ ಮತ್ತು ಸ್ವಾತಂತ್ರ್ಯದ ನಂತರವೂ ಭಾರತದ ರಕ್ಷಣಾ ಉತ್ಪಾದನಾ ಶಕ್ತಿ ತುಂಬಾ ಹೆಚ್ಚಿತ್ತು ಎಂದಿದ್ದಾರೆ.
“ಡಬ್ಲ್ಯುಡಬ್ಲ್ಯುಐಐನಲ್ಲಿ, ಭಾರತದಲ್ಲಿ ತಯಾರಾದ ಶಸ್ತ್ರಾಸ್ತ್ರಗಳು ಪ್ರಮುಖ ಪಾತ್ರವಹಿಸಿದವು. ಆದರೂ ನಂತರದ ವರ್ಷಗಳಲ್ಲಿ, ಈ ಶಕ್ತಿಯು ದುರ್ಬಲಗೊಂಡಿತು. ಆದರೆ ಭಾರತವು ಎಂದಿಗೂ ಸಾಮರ್ಥ್ಯಗಳ ಕೊರತೆಯನ್ನು ಹೊಂದಿಲ್ಲ ಎಂಬುದನ್ನು ಇದು ತೋರಿಸುತ್ತದೆ” ಎಂದು ಅವರು ಹೇಳಿದರು.
2022ರ ಕೇಂದ್ರ ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಮದು ತಗ್ಗಿಸಲು ಮತ್ತು ರಕ್ಷಣಾ ವಲಯದಲ್ಲಿ ಸ್ವಾವಲಂಬನೆಯನ್ನು ಉತ್ತೇಜಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದರು.
ರಕ್ಷಣಾ ಕ್ಷೇತ್ರಕ್ಕೆ ಮೀಸಲಿಟ್ಟ ಬಂಡವಾಳದ ಶೇಕಡಾ 68 ರಷ್ಟು ಸ್ಥಳೀಯ ಉದ್ಯಮವು ಪಡೆಯುತ್ತದೆ ಎಂದು ಅವರು ಹೇಳಿದರು, ಯುನಿವರ್ಸಲ್ ಸರ್ವಿಸ್ ಆಬ್ಲಿಗೇಶನ್ (ಯುಎಸ್ಒ) ನಿಧಿಯ 5% ಅನ್ನು ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ತಂತ್ರಜ್ಞಾನದ ನವೀಕರಣಗಳಿಗೆ ವಿನಿಯೋಗಿಸಲಾಗುತ್ತದೆ ಎಂದು ಹೇಳಿದರು. ಇ
“ಭಾರತ್ ನೆಟ್ ಅಡಿಯಲ್ಲಿ ಎಲ್ಲಾ ಹಳ್ಳಿಗಳಿಗೆ ಆಪ್ಟಿಕಲ್ ಫೈಬರ್ ನೆಟ್ ಹಾಕುವ ಒಪ್ಪಂದಗಳನ್ನು PPP ಆಧಾರದ ಮೇಲೆ ಒದಗಿಸಲಾಗುವುದು” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.