ನವದೆಹಲಿ: ರಷ್ಯಾ ದಾಳಿಗೆ ತತ್ತರಿಸಿರುವ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆ ತರಲು ಭಾರತ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಉಕ್ರೇನ್ ತನ್ನ ವಾಯು ಮಾರ್ಗಗಳನ್ನು ಮುಚ್ಚಿರುವ ಕಾರಣ ಪಕ್ಕದ ದೇಶದ ಗಡಿಗಳವರೆಗೆ ರಸ್ತೆ ಮಾರ್ಗವಾಗಿ ಬಂದು ಅಲ್ಲಿಂದ ವಾಯ ಮಾರ್ಗವಾಗಿ ತನ್ನವರನ್ನು ಕರೆ ತರಲು ಭಾರತ ಯೋಜಿಸಿದೆ.
ಈಗಾಗಲೇ ಮೊದಲ ಬ್ಯಾಚ್ನ ಭಾರತೀಯ ವಿದ್ಯಾರ್ಥಿಗಳು ಚೆರ್ನಿವ್ಟ್ಸಿಯಿಂದ ಉಕ್ರೇನ್-ರೊಮೇನಿಯಾ ಗಡಿಗೆ ತೆರಳಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ವಿದೇಶಾಂಗ ಸಚಿವಾಲಯದ ಕ್ಯಾಂಪ್ ಕಛೇರಿಗಳು ಈಗ ಪಶ್ಚಿಮ ಉಕ್ರೇನ್ನ ಎಲ್ವಿವ್ ಮತ್ತು ಚೆರ್ನಿವ್ಟ್ಸಿ ಪಟ್ಟಣಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಹೆಚ್ಚುವರಿ ರಷ್ಯನ್ ಮಾತನಾಡುವ ಅಧಿಕಾರಿಗಳನ್ನು ಈ ಶಿಬಿರ ಕಚೇರಿಗಳಿಗೆ ಕಳುಹಿಸಲಾಗುತ್ತಿದೆ.
ಗಡಿಗೆ ಆಗಮಿಸಿದ ಬಳಿಕ ನಾಗರಿಕರನ್ನು ವಾಯು ಮಾರ್ಗವಾಗಿ ಭಾರತಕ್ಕೆ ಕರೆತರಲಾಗುತ್ತದೆ. ಅದಕ್ಕಾಗಿ ಭಾರತ ಈಗಾಗಲೇ ಹಲವು ದೇಶಗಳೊಂದಿಗೆ ಮಾತುಕತೆ ನಡೆಸಿದೆ.
The first batch of Indian students have left Chernivtsi for the Ukraine-Romania border
MEA Camp Offices are now operational in Lviv and Chernivtsi towns in western Ukraine. Additional Russian speaking officials are being sent to these Camp Offices. pic.twitter.com/OvRlqA8Q4t
— ANI (@ANI) February 25, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.