ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣವನ್ನು ಖಂಡಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಮೆರಿಕಾ ಪ್ರಾಯೋಜಿತ ನಿರ್ಣಯದಿಂದ ಭಾರತ ದೂರ ಉಳಿದಿದ್ದು, ಎಲ್ಲಾ ಸದಸ್ಯ ರಾಷ್ಟ್ರಗಳು ಭಿನ್ನಾಭಿಪ್ರಾಯ ದೂರ ಮಾಡುವ ನಿಟ್ಟಿನಲ್ಲಿ ಸಂವಾದದಲ್ಲಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದೆ.
ವಿಶ್ವಸಂಸ್ಥೆಯ ಖಾಯಂ ಸದಸ್ಯ ಮತ್ತು ಪ್ರಸ್ತುತ ಫೆಬ್ರವರಿ ತಿಂಗಳಿಗೆ ಭದ್ರತಾ ಮಂಡಳಿಯ ಅಧ್ಯಕ್ಷನಾಗಿರುವ ರಷ್ಯಾ ತನ್ನ ವೀಟೋ ಅಧಿಕಾರವನ್ನು ಬಳಸಿಕೊಂಡಿರುವ ಕಾರಣ ನಿರ್ಣಯ ಅಂಗೀಕಾರಗೊಂಡಿಲ್ಲ. ನಿರ್ಣಯದ ಪರವಾಗಿ 11 ಮತಗಳು ಬಿದ್ದಿವೆ. ಭಾರತ, ಚೀನಾ ಮತ್ತು ಯುಎಇ ನಿರ್ಣಯದಿಂದ ದೂರ ಉಳಿದಿವೆ.
“ಉಕ್ರೇನ್ನಲ್ಲಿನ ಇತ್ತೀಚಿನ ಬೆಳವಣಿಗೆಗಳು ಭಾರತಕ್ಕೆ ಆಳವಾಗಿ ನೋವುಂಟು ಮಾಡಿದೆ. ಹಿಂಸಾಚಾರ ಮತ್ತು ಯುದ್ಧಗಳನ್ನು ತಕ್ಷಣ ನಿಲ್ಲಿಸಲು ಪ್ರಯತ್ನಗಳನ್ನು ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ವಿಶ್ವಸಂಸ್ಥೆಯ ಭಾರತದ ಶಾಶ್ವತ ಪ್ರತಿನಿಧಿ ರಾಯಭಾರಿ ಟಿಎಸ್ ತಿರುಮುರ್ತಿ ಭದ್ರತಾ ಮಂಡಳಿ ಮತದಾನದ ಸಂದರ್ಭದಲ್ಲಿ ಭಾರತದ ನಿಲುವನ್ನು ವಿವರಿಸಿದರು.
UNSC’s consideration of the draft resolution on Ukraine
📺Watch: India’s Explanation of Vote by Permanent Representative @AmbTSTirumurti ⤵️@MeaIndia pic.twitter.com/UB2L5JLuyS
— India at UN, NY (@IndiaUNNewYork) February 25, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.