ಬೆಂಗಳೂರು: ಇಂದು ಸೇಡಂ ಪಟ್ಟಣದಲ್ಲಿ ಸೇಡಂ-ಚಿಂಚೋಳಿ ರಸ್ತೆಯಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು ಯೋಜನೆಯಡಿ 12 ಎಕರೆ ಪ್ರದೇಶದಲ್ಲಿ 48 ಕೋಟಿ ರೂ. ವೆಚ್ಚದಲ್ಲಿ ಜಿ+2 ಮಾದರಿಯ 750 ಮನೆಗಳ ನಿರ್ಮಾಣದ ಕಾಮಗಾರಿಗೆ ರಾಜ್ಯದ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಮುಂದಿನ ಆರು ತಿಂಗಳಲ್ಲಿ ಗುಣಮಟ್ಟದ ಮನೆ ಇಲ್ಲಿ ನಿರ್ಮಾಣವಾಗಬೇಕು. ರಸ್ತೆಗೆ ಹೊಂದಿಕೊಂಡೇ ಈ ಪ್ರದೇಶವಿರುವುದರಿಂದ ರಸ್ತೆಗಿಂತ ಎರಡೂವರೆ ಅಡಿ ಮೇಲೆ ಬೇಸ್ ಮೆಂಟ್ ಇರಬೇಕು ಎಂದು ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಸೂಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.