ನವದೆಹಲಿ: ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಹೊತ್ತ ಏರ್ ಇಂಡಿಯಾದ ಎರಡನೇ ಮತ್ತು ಮೂರನೇ ಸ್ಥಳಾಂತರಿಸುವ ವಿಮಾನವು ಇಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಉಕ್ರೇನ್ನಲ್ಲಿನ ಭಾರತೀಯರನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆಗೆ ಆಪರೇಷನ್ ಗಂಗಾ ಎಂದು ಹೆಸರಿಸಲಾಗಿದೆ.
ರೊಮೇನಿಯಾದ ರಾಜಧಾನಿ ಬುಕಾರೆಸ್ಟ್ನಿಂದ ಎರಡನೇ ಏರ್ ಇಂಡಿಯಾ ವಿಮಾನ AI1942 ಭಾರತದ 250 ನಾಗರಿಕರನ್ನು ಹೊತ್ತು ಇಂದು ಮುಂಜಾನೆ ದೆಹಲಿ ತಲುಪಿದೆ.
ಹಂಗೇರಿಯ ರಾಜಧಾನಿ ಬುಡಾಪೆಸ್ಟ್ನಿಂದ ಏರ್ ಇಂಡಿಯಾದ ಮೂರನೇ ಸ್ಥಳಾಂತರಿಸುವ ವಿಮಾನ AI1940 ಸಹ ಇಂದೇ 240 ಭಾರತೀಯರನ್ನು ಹೊತ್ತು ದೆಹಲಿಗೆ ಹಿಂತಿರುಗಿದೆ.
ಭಾರತವು ಶನಿವಾರ ಉಕ್ರೇನ್ನಲ್ಲಿ ರಷ್ಯಾದ ಮಿಲಿಟರಿ ಆಕ್ರಮಣದ ಮಧ್ಯೆ ಸಿಲುಕಿರುವ ತನ್ನ ನಾಗರಿಕರ ಸ್ಥಳಾಂತರ ಕಾರ್ಯ ಪ್ರಾರಂಭಿಸಿತು, ಮೊದಲ ಸ್ಥಳಾಂತರಿಸುವ ವಿಮಾನ AI1944 ಸಂಜೆ ಬುಚಾರೆಸ್ಟ್ನಿಂದ ಮುಂಬೈಗೆ 219 ಜನರನ್ನು ಕರೆತಂದಿತು.
ಫೆಬ್ರವರಿ 24 ರ ಬೆಳಿಗ್ಗೆ ರಷ್ಯಾದ ಮಿಲಿಟರಿ ಆಕ್ರಮಣವು ಪ್ರಾರಂಭವಾದಾಗಿನಿಂದ ಉಕ್ರೇನಿಯನ್ ವಾಯುಪ್ರದೇಶವನ್ನು ಮುಚ್ಚಲಾಗಿದೆ. ಆದ್ದರಿಂದ, ಭಾರತೀಯ ಸ್ಥಳಾಂತರಿಸುವ ವಿಮಾನಗಳು ಬುಕಾರೆಸ್ಟ್ ಮತ್ತು ಬುಡಾಪೆಸ್ಟ್ನಿಂದ ಕಾರ್ಯನಿರ್ವಹಿಸುತ್ತಿವೆ.
ಉಕ್ರೇನ್-ರೊಮೇನಿಯಾ ಗಡಿ ಮತ್ತು ಉಕ್ರೇನ್-ಹಂಗೇರಿ ಗಡಿಯನ್ನು ತಲುಪಿದ ಭಾರತೀಯ ಪ್ರಜೆಗಳನ್ನು ಕ್ರಮವಾಗಿ ಬುಕಾರೆಸ್ಟ್ ಮತ್ತು ಬುಡಾಪೆಸ್ಟ್ಗೆ ಭಾರತೀಯ ಸರ್ಕಾರಿ ಅಧಿಕಾರಿಗಳ ನೆರವಿನೊಂದಿಗೆ ರಸ್ತೆಯ ಮೂಲಕ ಕರೆದೊಯ್ಯಲಾಗಿದ್ದು, ಈ ಏರ್ ಇಂಡಿಯಾ ವಿಮಾನಗಳಲ್ಲಿ ಅವರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತಕ್ಕೆ ಬಂದಿಳಿದಿರುವ ಭಾರತೀಯ ವಿದ್ಯಾರ್ಥಿಗಳು ಭಾರತ ಸರ್ಕಾರದ ಕಾರ್ಯಕ್ಕೆ ಧನ್ಯವಾದ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.