ನವದೆಹಲಿ: ನಾಲ್ವರು ಕೇಂದ್ರ ಸಂಪುಟ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಜನರಲ್ ವಿ.ಕೆ ಸಿಂಗ್ ಅವರು ಉಕ್ರೇನ್ನಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಸಂಘಟಿಸಲು ಮತ್ತು ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಉಕ್ರೇನ್ನ ನೆರೆಯ ದೇಶಗಳಿಗೆ ಪ್ರಯಾಣಿಸುತ್ತಿದ್ದಾರೆ.
ಈ ಸಚಿವರುಗಳು ಭಾರತದ ವಿಶೇಷ ರಾಯಭಾರಿಗಳಾಗಿ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಸಿಂಧಿಯಾ ರೊಮೇನಿಯಾ ಮತ್ತು ಮೊಲ್ಡೊವಾದಲ್ಲಿ ಸ್ಥಳಾಂತರ ಕಾರ್ಯಾಚರಣೆ ನೋಡಿಕೊಳ್ಳಲಿದ್ದಾರೆ. ರಿಜಿಜು ಸ್ಲೋವಾಕಿಯಾಕ್ಕೆ ತೆರಳಲಿದ್ದಾರೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ನೋಡಿಕೊಳ್ಳಲು ಹರ್ದೀಪ್ ಸಿಂಗ್ ಪುರಿ ಹಂಗೇರಿಗೆ ತೆರಳಲಿದ್ದಾರೆ ಮತ್ತು ಜನರಲ್ ವಿ ಕೆ ಸಿಂಗ್ ಪೋಲೆಂಡ್ಗೆ ತೆರಳಲಿದ್ದಾರೆ
ಉತ್ತರ ಪ್ರದೇಶದಿಂದ ಹಿಂದಿರುಗಿದ ತಕ್ಷಣ, ಪ್ರಧಾನಿ ನಿನ್ನೆ ಉಕ್ರೇನ್ ವಿಷಯದ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು. ಉಕ್ರೇನ್ನಲ್ಲಿ ಸಿಲುಕಿರುವ ಎಲ್ಲಾ ನಾಗರಿಕರನ್ನು ಮರಳಿ ಕರೆತರಲು ಸರ್ಕಾರ ಸಾಧ್ಯವಿರುವ ಎಲ್ಲವನ್ನೂ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.