ನವದೆಹಲಿ: ರಷ್ಯಾ-ಉಕ್ರೇನ್ ನಡುವೆ ಉನ್ನತ ಮಟ್ಟದ ನಿಯೋಗಗಳ ಮಾತುಕತೆ ಬೆಲಾರಸ್ನಲ್ಲಿ ಪ್ರಾರಂಭವಾಗಿದೆ. ಈ ಮಾತುಕತೆ ಎರಡು ದೇಶಗಳ ನಡುವಿನ ದ್ವೇಷವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿದೆ” ಎಂದು ಮೂಲಗಳಿ ವರದಿ ಮಾಡಿವೆ.
ಉಕ್ರೇನಿಯನ್ ನಿಯೋಗವು ಬೆಲಾರಸ್ ಗಡಿಯಲ್ಲಿ ರಷ್ಯಾದೊಂದಿಗೆ ಮಾತುಕತೆಗೆ ಆಗಮಿಸಿದೆ. ಈ ಮಾತುಕತೆ ಯುದ್ಧ ಸನ್ನಿವೇಶ ನಿಲ್ಲಿಸುವಲ್ಲಿ ಯಶಸ್ವಿಯಾಗಲಿದೆಯೇ ಎಂಬುದು ಅಸ್ಪಷ್ಟವಾಗಿದೆ.
ಉಕ್ರೇನ್ ಮತ್ತು ರಷ್ಯಾ ನಡುವಿನ ಮಾತುಕತೆಗಳು ಬೆಲಾರಸ್ ಗಡಿಯಲ್ಲಿ ಪ್ರಾರಂಭವಾಗಿವೆ ಎಂದು ಉಕ್ರೇನಿಯನ್ ಅಧ್ಯಕ್ಷೀಯ ಸಲಹೆಗಾರ ಮೈಖೈಲೊ ಪೊಡೊಲ್ಯಾಕ್ ಹೇಳಿದ್ದಾರೆ. ನಮ್ಮ ಗುರಿ ಕದನ ವಿರಾಮ ಮತ್ತು ರಷ್ಯಾ ತನ್ನ ಪಡೆಗಳನ್ನು ಹಿಂತೆಗೆದುಕೊಳ್ಳುವುದಾಗಿದೆ ಎಂದಿದ್ದಾರೆ.
ಉಕ್ರೇನ್ನೊಂದಿಗೆ ಒಪ್ಪಂದಕ್ಕೆ ಬರಲು ಬಯಸುವುದಾಗಿ ರಷ್ಯಾ ಹೇಳಿದೆ.
ಈ ನಡುವೆ, ಉಕ್ರೇನ್ನಲ್ಲಿ ಸಿಲುಕಿರುವ 240 ಭಾರತೀಯ ಪ್ರಜೆಗಳನ್ನು ಹೊತ್ತ ಆರನೇ ವಿಮಾನವು ಸೋಮವಾರ ಬೆಳಿಗ್ಗೆ ಬುಡಾಪೆಸ್ಟ್ (ಹಂಗೇರಿ) ನಿಂದ ನವದೆಹಲಿಗೆ ಹೊರಟಿದೆ. ಯುದ್ಧ ಪೀಡಿತ ಉಕ್ರೇನ್ನಿಂದ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಭಾರತದ ಕಾರ್ಯಾಚರಣೆಯಾದ ಆಪರೇಷನ್ ಗಂಗಾದ ಭಾಗವಾಗಿ ಈ ವಿಮಾನವು ಕಾರ್ಯಾಚರಣೆಯಲ್ಲಿದೆ.
ಕಳೆದ ಕೆಲವು ದಿನಗಳಲ್ಲಿ ಬಿಕ್ಕಟ್ಟು ಪೀಡಿತ ಪ್ರದೇಶದಿಂದ ಸಾವಿರಾರು ಭಾರತೀಯ ಪ್ರಜೆಗಳನ್ನು ದೇಶಕ್ಕೆ ಕರೆತರಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.