ನವದೆಹಲಿ: 218 ಭಾರತೀಯ ಪ್ರಜೆಗಳನ್ನು ಹೊತ್ತ ಒಂಬತ್ತನೇ ವಿಮಾನವು ರೊಮೇನಿಯಾದ ರಾಜಧಾನಿ ಬುಕಾರೆಸ್ಟ್ನಿಂದ ಆಪರೇಷನ್ ಗಂಗಾ ಅಡಿಯಲ್ಲಿ ನವದೆಹಲಿಗೆ ಹೊರಟಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಮಾಹಿತಿ ನೀಡಿದ್ದಾರೆ.
ಟ್ವಿಟರ್ ಮಾಡಿರುವ ಜೈಶಂಕರ್, “ನಮ್ಮ ಸಹ ಭಾರತೀಯರು ಸುರಕ್ಷಿತವಾಗಿರುವವರೆಗೆ ನಾವು ವಿಶ್ರಾಂತಿ ಪಡೆಯುವುದಿಲ್ಲ. ಒಂಬತ್ತನೇ ಆಪರೇಷನ್ ಗಂಗಾ ವಿಮಾನವು 218 ಭಾರತೀಯ ಪ್ರಜೆಗಳೊಂದಿಗೆ ನವದೆಹಲಿಗೆ ಬುಚಾರೆಸ್ಟ್ನಿಂದ ಹೊರಟಿದೆ” ಎಂದು ಹೇಳಿದ್ದಾರೆ.
ಈ ನಡುವೆ, ಉಕ್ರೇನ್ ಬಿಕ್ಕಟ್ಟಿನ ಕುರಿತು ಸೋಮವಾರ ಸಂಜೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಎಲ್ಲಾ ಭಾರತೀಯರು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಇಡೀ ಸರ್ಕಾರಿ ಯಂತ್ರವು ಹಗಲಿರುಳು ಶ್ರಮಿಸುತ್ತದೆ ಎಂದು ಹೇಳಿದ್ದಾರೆ.
ಉಕ್ರೇನ್ನಲ್ಲಿನ ಪರಿಸ್ಥಿತಿಯ ಕುರಿತು ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಎರಡನೇ ಉನ್ನತ ಮಟ್ಟದ ಸಭೆ ಇದಾಗಿದೆ.
ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಜನರಲ್ (ನಿವೃತ್ತ) ವಿಕೆ ಸಿಂಗ್ ಸೇರಿದಂತೆ ವಿಶೇಷ ರಾಯಭಾರಿಗಳು’ ಉಕ್ರೇನ್ನಲ್ಲಿ ನಡೆಯುತ್ತಿರುವ ರಷ್ಯಾದ ಸೇನಾ ಕಾರ್ಯಾಚರಣೆಗಳ ಮಧ್ಯೆ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯದ ಮೇಲ್ವಿಚಾರಣೆಗಾಗಿ ಉಕ್ರೇನ್ನ ನೆರೆಯ ದೇಶಗಳಿಗೆ ಪ್ರಯಾಣಿಸಲಿದ್ದಾರೆ.
ಸಂಘರ್ಷ ಪೀಡಿತ ಉಕ್ರೇನ್ನಿಂದ ಸಿಲುಕಿರುವ ವಿದ್ಯಾರ್ಥಿಗಳು ಮತ್ತು ಭಾರತೀಯ ನಾಗರಿಕರನ್ನು ಮರಳಿ ಕರೆತರಲು ಕೇಂದ್ರ ಸರ್ಕಾರವು “ಆಪರೇಷನ್ ಗಂಗಾ” ಅನ್ನು ಪ್ರಾರಂಭಿಸಿದೆ. “ಆಪರೇಷನ್ ಗಂಗಾ” ಅಡಿಯಲ್ಲಿ ಏರ್ ಇಂಡಿಯಾ ವಿಶೇಷ ವಿಮಾನಗಳನ್ನು ನಿರ್ವಹಿಸುತ್ತಿದೆ.
ಭಾರತವು ಇದುವರೆಗೆ 8,000 ಕ್ಕೂ ಹೆಚ್ಚು ಪ್ರಜೆಗಳನ್ನು ಸ್ಥಳಾಂತರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೋಮವಾರ ತಿಳಿಸಿದೆ.
हमारे साथी भारतीयों की सुरक्षा सुनिश्चित होने तक प्रयास अविराम जारी रहेंगे ।
नौवीं #ऑपरेशनगंगा उड़ान 218 भारतीय नागरिकों के साथ बुखारेस्ट से नई दिल्ली के लिए रवाना। pic.twitter.com/FrHc4j1TZD
— Dr. S. Jaishankar (@DrSJaishankar) February 28, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.