ನವದೆಹಲಿ: ಆಪರೇಷನ್ ಗಂಗಾ ಅಡಿಯಲ್ಲಿ ನಡೆಯುತ್ತಿರುವ ಸ್ಥಳಾಂತರ ಕಾರ್ಯಾಚರಣೆಯನ್ನು ಇನ್ನಷ್ಟು ಚುರುಕುಗೊಳಿಸುವ ಸಲುವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ವಾಯುಪಡೆಯನ್ನು ಈ ಕಾರ್ಯಾಚರಣೆಗೆ ಸೇರುವಂತೆ ಕರೆ ನೀಡಿದ್ದಾರೆ.
ಮೂಲಗಳ ಪ್ರಕಾರ, ನಮ್ಮ ವಾಯುಪಡೆಯ ಸಾಮರ್ಥ್ಯದಿಂದಾಗಿ ಕಡಿಮೆ ಸಮಯದಲ್ಲಿ ಹೆಚ್ಚಿನ ಜನರನ್ನು ಸ್ಥಳಾಂತರ ಮಾಡಲು ಸಾಧ್ಯವಾಗಲಿದೆ. ಇದು ಮಾನವೀಯ ನೆರವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಿಸಲು ಸಹಾಯ ಮಾಡುತ್ತದೆ. ಇಂದಿನಿಂದ ಆಪರೇಷನ್ ಗಂಗಾ ಭಾಗವಾಗಿ ಭಾರತೀಯ ವಾಯುಪಡೆ ಹಲವಾರು ಸಿ-17 ವಿಮಾನಗಳನ್ನು ನಿಯೋಜಿಸುವ ಸಾಧ್ಯತೆಯಿದೆ.
ಫೆಬ್ರುವರಿ 24 ರಿಂದ ಉಕ್ರೇನಿಯನ್ ವಾಯುಪ್ರದೇಶವನ್ನು ಮುಚ್ಚಿದ ಕಾರಣ ಇಲ್ಲಿಯವರೆಗೆ ಭಾರತೀಯ ವಿಮಾನಗಳು ರೊಮೇನಿಯಾ ಮತ್ತು ಹಂಗೇರಿಯಿಂದ ಭಾರತೀಯರನ್ನು ಸ್ಥಳಾಂತರಿಸುತ್ತಿವೆ. ಈ ಎರಡು ದೇಶಗಳು ಪಶ್ಚಿಮ ಭಾಗದಲ್ಲಿ ಉಕ್ರೇನ್ನೊಂದಿಗೆ ಭೂ ಗಡಿಯನ್ನು ಹೊಂದಿರುವ ದೇಶಗಳಾಗಿವೆ.
ಫೆಬ್ರವರಿ 26ರಿಂದ ಭಾರತವು ತನ್ನ ಸುಮಾರು 14,000 ನಾಗರಿಕರನ್ನು ಸ್ಥಳಾಂತರಿಸುವ ಕಾರ್ಯ ಆರಂಭಿಸಿದೆ
ಪ್ರಧಾನಿ ಮೋದಿಯವರು ಖುದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಮತ್ತು ಅವರು ಈಗಾಗಲೇ ಸೋಮವಾರ ಸಂಜೆಯವರೆಗೆ ಮೂರು ಉನ್ನತ ಮಟ್ಟದ ಸಭೆಗಳನ್ನು ನಡೆಸಿದ್ದಾರೆ.
ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರೊಮೇನಿಯಾ ಮತ್ತು ಮೊಲ್ಡೊವಾಗೆ, ಕಿರಣ್ ರಿಜಿಜು ಸ್ಲೋವಾಕಿಯಾಕ್ಕೆ, ಹರ್ದೀಪ್ ಸಿಂಗ್ ಪುರಿ ಹಂಗೇರಿಗೆ ಮತ್ತು ಜನರಲ್ ವಿಕೆ ಸಿಂಗ್ (ನಿವೃತ್ತ) ಪೋಲೆಂಡ್ಗೆ ಭಾರತೀಯ ಪ್ರಜೆಗಳ ಸ್ಥಳಾಂತರದ ಮೇಲ್ವಿಚಾರಣೆಗೆ ತೆರಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.