ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಉಕ್ರೇನ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು.
ನಿನ್ನೆ, ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಆಪರೇಷನ್ ಗಂಗಾ ಅಡಿಯಲ್ಲಿ ನಡೆಯುತ್ತಿರುವ ಪ್ರಯತ್ನಗಳನ್ನು ಪರಿಶೀಲಿಸಲು ಮೋದಿ ಅವರು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಲ್ಲಿನ ಎಲ್ಲಾ ಭಾರತೀಯ ಪ್ರಜೆಗಳು ಸುರಕ್ಷಿತವಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಇಡೀ ಸರ್ಕಾರಿ ಯಂತ್ರವು ಹಗಲಿರುಳು ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.
ನಾಲ್ವರು ಹಿರಿಯ ಸಚಿವರು ತಮ್ಮ ವಿಶೇಷ ಪ್ರತಿನಿಧಿಗಳಾಗಿ ವಿವಿಧ ರಾಷ್ಟ್ರಗಳಿಗೆ ಭೇಟಿ ನೀಡಿರುವುದು ಸ್ಥಳಾಂತರ ಪ್ರಯತ್ನಗಳಿಗೆ ಶಕ್ತಿ ತುಂಬಲಿದೆ ಎಂದು ಪ್ರಧಾನಿ ತಿಳಿಸಿದರು. ಇದು ಸರಕಾರ ಈ ವಿಷಯಕ್ಕೆ ನೀಡಿರುವ ಆದ್ಯತೆಯನ್ನು ಪ್ರತಿಬಿಂಬಿಸುತ್ತದೆ ಎಂದರು.
ಜಗತ್ತು ಒಂದು ಕುಟುಂಬ ಎಂಬ ಭಾರತದ ಧ್ಯೇಯವಾಕ್ಯದಿಂದ ಸ್ಪೂರ್ತಿ ಪಡೆದಿರುವ ಮೋದಿ, ಉಕ್ರೇನ್ನಲ್ಲಿ ಸಿಲುಕಿರುವ ನೆರೆಯ ದೇಶಗಳು ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳ ಜನರಿಗೆ ಭಾರತವು ಸಹಾಯ ಮಾಡುತ್ತದೆ ಮತ್ತು ಅವರು ಸಹಾಯವನ್ನು ಪಡೆಯಬಹುದು ಎಂದು ಹೇಳಿದರು.
ಸಭೆಯಲ್ಲಿ ಕೇಂದ್ರ ಸಚಿವರಾದ ಡಾ. ಎಸ್ ಜೈಶಂಕರ್, ಹರ್ದೀಪ್ ಪುರಿ, ಕಿರಣ್ ರಿಜಿಜು, ಪಿಯೂಷ್ ಗೋಯಲ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಜನರಲ್ ವಿಕೆ ಸಿಂಗ್ ಉಪಸ್ಥಿತರಿದ್ದರು.
ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.