ನವದೆಹಲಿ: ಎಲ್ಲರಿಗೂ ಕೈಗೆಟಕುವ ದರದಲ್ಲಿ ಔಷಧಿಗಳನ್ನು ಒದಗಿಸಲು ಭಾರತದಲ್ಲಿ ಸುಮಾರು 8,600 ಜನೌಷಧಿ ಕೇಂದ್ರಗಳು ಕಾರ್ಯಾಚರಿಸುತ್ತಿವೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
ಜೆನೆರಿಕ್ ಔಷಧಿಗಳನ್ನು ಉತ್ತೇಜಿಸಲು ಇಂದಿನಿಂದ ಮಾರ್ಚ್ 7 ರವರೆಗೆ ಜನೌಷಧಿ ಸಪ್ತಾಹವನ್ನು ಆಚರಿಸಲಾಗುತ್ತಿದೆ ಎಂದು ಮಾಂಡವೀಯ ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ. ಜನೌಷಧಿ ಯೋಜನೆ ಮತ್ತು ಜೆನೆರಿಕ್ ಔಷಧಿಗಳ ಬಗ್ಗೆ ಜಾಗೃತಿ ಮೂಡಿಸಲು ದೇಶಾದ್ಯಂತ 75 ಸ್ಥಳಗಳಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಕೇಂದ್ರಗಳಿಂದ ಲಕ್ಷಾಂತರ ಜನರು ಅಗ್ಗದ ದರದಲ್ಲಿ ಔಷಧಿಗಳನ್ನು ಖರೀದಿಸುತ್ತಾರೆ. ಈ ಯೋಜನೆಯಡಿಯಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಮತ್ತು ಕೈಗೆಟುಕುವ ಔಷಧಿಗಳು ಸಿಗುವಂತೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಅವರು ಜನರಿಗೆ ಭರವಸೆ ನೀಡಿದ್ದಾರೆ.
जन औषधि दिवस सप्ताह के पहले दिन आज ‘आज़ादी के 75वें वर्ष में देशभर में 75 जगहों पर जन औषधि परियोजना और जेनरिक दवाइयों के प्रति जागरूकता फैलाने हेतु पदयात्रा निकाली जा रही है।
इस योजना के अंतर्गत सभी को उत्तम एवं सस्ती दवाई मिले इसके लिए हम प्रतिबद्ध हैं। #JanaushadhiDiwas2022 pic.twitter.com/GL8FkBCaE8
— Dr Mansukh Mandaviya (@mansukhmandviya) March 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.