ನವದೆಹಲಿ: ಉಕ್ರೇನ್ನಲ್ಲಿರುವ ಭಾರತೀಯ ನಾಗರಿಕರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುವ ಸಲುವಾಗಿ ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ವಿಕೆ ಸಿಂಗ್ ಅವರು ಪೋಲ್ಯಾಂಡ್ಗೆ ತಲುಪಿದ್ದಾರೆ.
ಈ ಬಗ್ಗೆ ವಿಕೆ ಸಿಂಗ್ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳ ಸ್ಥಳಾಂತರಿಸುವ ಪ್ರಯತ್ನಗಳನ್ನು ಮೇಲ್ವಿಚಾರಣೆ ಮಾಡಲು ಪೋಲ್ಯಾಂಡ್ಗೆ ತಲುಪಿದ ನಂತರ, ಅಲ್ಲಿನ ವಾರ್ಸಾದಲ್ಲಿರುವ ಗುರುದ್ವಾರದಲ್ಲಿ ತಂಗಿದ್ದ ಭಾರತೀಯ ವಿದ್ಯಾರ್ಥಿಗಳ ಗುಂಪನ್ನು ಭೇಟಿಯಾದರು.
ಉಕ್ರೇನ್ನ ನಾಲ್ಕು ನೆರೆಯ ರಾಷ್ಟ್ರಗಳಿಗೆ ಕೇಂದ್ರ ಸಚಿವರನ್ನು ಒಳಗೊಂಡ ವಿಶೇಷ ಪ್ರತಿನಿಧಿಗಳನ್ನು ಕಳುಹಿಸುವ ನಿರ್ಧಾರವನ್ನು ಸೋಮವಾರ ಸರ್ಕಾರ ಕೈಗೊಂಡಿತ್ತು. ಜನರಲ್ ವಿ ಕೆ ಸಿಂಗ್, ಇತರ ಕೇಂದ್ರ ಮಂತ್ರಿಗಳಾದ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಕಾನೂನು ಸಚಿವ ಕಿರಣ್ ರಿಜಿಜು, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಪುರಿ ಈಗಾಗಲೇ ತಮಗೆ ಗೊತ್ತುಪಡಿಸಿದ ಸ್ಥಳಗಳಿಗೆ ತೆರಳುತ್ತಿದ್ದಾರೆ. ಈ ವಿಶೇಷ ಪ್ರತಿನಿಧಿಗಳು ತುಳು ಮಟ್ಟದಲ್ಲಿ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಸಮನ್ವಯಗೊಳಿಸುತ್ತಾರೆ ಮತ್ತು ಮೇಲ್ವಿಚಾರಣೆ ಮಾಡುತ್ತಾರೆ.
I have landed in Poland, and I am assessing the situation on the ground.
Here, I have interacted with Indian students at Guru Singh Sabha, Warsaw.
The Government of India will leave no stone unturned to bring back everyone safely.#General_In_Poland #OperationGanga pic.twitter.com/W4srQjAODj— General Vijay Kumar Singh (@Gen_VKSingh) March 1, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.