ನವದೆಹಲಿ: ತುರ್ತು ಸಲಹೆಯನ್ನು ನೀಡಿರುವ ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಉಕ್ರೇನ್ ನಗರದಲ್ಲಿ ಪರಿಸ್ಥಿತಿ ಹದಗೆಟ್ಟಿರುವ ಕಾರಣ ತಕ್ಷಣವೇ ಖಾರ್ಕಿವ್ನಿಂದ ಹೊರಹೋಗುವಂತೆ ತನ್ನ ಪ್ರಜೆಗಳಿಗೆ ತಿಳಿಸಿದೆ.
ಭಾರತೀಯ ರಾಯಭಾರ ಕಚೇರಿಯು ಟ್ವೀಟ್ ಮಾಡಿದ್ದು, “ಸುರಕ್ಷತೆ ಮತ್ತು ಭದ್ರತೆಗಾಗಿ ತಕ್ಷಣವೇ ಖಾರ್ಕಿವ್ ಅನ್ನು ತೊರೆಯಬೇಕು, ಪೆಸೊಚಿನ್, ಬಾಬಾಯೆ ಮತ್ತು ಬೆಜ್ಲ್ಯುಡೋವ್ಕಾಗೆ ಆದಷ್ಟು ಬೇಗ ಹೋಗಬೇಕು.ಇಂದು 1800 ಗಂಟೆಗಳ (ಉಕ್ರೇನಿಯನ್ ಸಮಯ) ಒಳಗೆ ಈ ಪ್ರದೇಶ ತಲುಪಬೇಕು” ಎಂದು ರಾಯಭಾರ ಕಚೇರಿ ಹೇಳಿದೆ.
ಪೂರ್ವ ಉಕ್ರೇನಿಯನ್ ನಗರವಾದ ಖಾರ್ಕಿವ್ ಮೇಲೆ ರಷ್ಯಾ ತನ್ನ ದಾಳಿಯನ್ನು ಮುಂದುವರೆಸುತ್ತಿರುವ ಹಿನ್ನೆಲೆಯಲ್ಲಿ ಭಾರತದ ಸಲಹೆ ಹೊರಡಿಸಿದೆ. ರಷ್ಯಾದ ಪಡೆಗಳು ಬುಧವಾರ ಖಾರ್ಕಿವ್ನಲ್ಲಿರುವ ಸಿಟಿ ಕೌನ್ಸಿಲ್ ಕಟ್ಟಡಕ್ಕೆ ಕ್ರೂಸ್ ಕ್ಷಿಪಣಿಯನ್ನು ಹಾರಿಸಿದವು ಎಂದು ಪ್ರದೇಶದ ಉಪ ಗವರ್ನರ್ ರೋಮನ್ ಸೆಮೆನುಖಾ ಹೇಳಿದ್ದಾರೆ.
URGENT ADVISORY TO INDIAN STUDENTS IN KHARKIV.@MEAIndia @PIB_India @DDNational @DDNewslive pic.twitter.com/2dykst5LDB
— India in Ukraine (@IndiainUkraine) March 2, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.