ಮಾಸ್ಕೋ: ಅಂತಾರಾಷ್ಟ್ರೀಯ ಒತ್ತಡ ಮತ್ತು ಕಠಿಣ ನಿರ್ಬಂಧಗಳ ಹೊರತಾಗಿಯೂ, ಭಾರತಕ್ಕೆ S-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಪೂರೈಸುವ ಒಪ್ಪಂದದ ಮೇಲೆ ಈ ಒತ್ತಡದ ತಂತ್ರಗಳು ಪರಿಣಾಮ ಬೀರುವುದಿಲ್ಲ ಎಂದು ರಷ್ಯಾ ಬುಧವಾರ ಭರವಸೆ ನೀಡಿದೆ.
“ಭಾರತಕ್ಕೆ S-400 ಪೂರೈಕೆಗೆ ಸಂಬಂಧಿಸಿದಂತೆ ನಾವು ಯಾವುದೇ ಅಡೆತಡೆಗಳನ್ನು ನಿರೀಕ್ಷಿಸುವುದಿಲ್ಲ. ಈ ಒಪ್ಪಂದವನ್ನು ಅಡೆತಡೆಯಿಲ್ಲದೆ ಮುಂದುವರಿಸಲು ನಮಗೆ ಮಾರ್ಗಗಳಿವೆ. ಇದರಲ್ಲಿ ಹೊಸ ಅಥವಾ ಹಳೆಯ ನಿರ್ಬಂಧಗಳು ಯಾವುದೇ ರೀತಿಯಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ಭಾರತಕ್ಕೆ ರಷ್ಯಾದ ನಿಯೋಜಿತ ರಾಯಭಾರಿ ಡೆನಿಸ್ ಅಲಿಪೋವ್ ಅವರು ಭಾರತದೊಂದಿಗಿನ ರಕ್ಷಣಾ ಒಪ್ಪಂದದಲ್ಲಿನ ನಿರ್ಬಂಧಗಳ ಪ್ರಭಾವದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರವಾಗಿ ಹೇಳಿದರು.
ಭಾರತ ಈ ಬಿಕ್ಕಟ್ಟಿನ ಆಳವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿರುವುದರಿಂದ ವಿಶ್ವಸಂಸ್ಥೆಯಲ್ಲಿ ಸಮತೋಲಿತ ನಿಲುವು ವ್ಯಕ್ತಪಡಿಸಿದೆ. ಮಾಸ್ಕೋ ಭಾರತಕ್ಕೆ ಹೆಚ್ಚು ಕೃತಜ್ಞರಾಗಿರುತ್ತದೆ ಎಂದು ರಷ್ಯಾದ ರಾಯಭಾರಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.