ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಅವರು ಬೆಂಗಳೂರಿನಲ್ಲಿನ ಶ್ರೀಕಂಠೇಶ್ವರ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.
ದೇವಾಲಯಗಳಲ್ಲಿ ರಾಜ್ಯದ ಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿ, ರಾಜ್ಯದಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುವಂತೆ ಪ್ರಾರ್ಥನೆ ಮಾಡಿದ್ದಾರೆ. ಈ ಬಗ್ಗೆ ಸಿಎಂ ಟ್ವಿಟ್ ಮಾಡಿದ್ದಾರೆ.
“ರಾಜ್ಯದ ಮುಖ್ಯಮಂತ್ರಿಯಾಗಿ ಚೊಚ್ಚಲ ಬಜೆಟ್ ಇಂದು ಮಂಡಿಸಲಿದ್ದು, ಇದರ ಪ್ರಯುಕ್ತ ಬೆಂಗಳೂರಿನ ಶ್ರೀಕಂಠೇಶ್ವರ ದೇವಸ್ಥಾನ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಇಂದು ವಿಶೇಷ ಪೂಜೆ ಸಲ್ಲಿಸಿ, ಸಮಸ್ತ ಕರ್ನಾಟಕದ ಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಲಾಯಿತು” ಎಂದಿದ್ದಾರೆ.
ಈ ವೇಳೆ ದೇವಾಲಯದ ಹೊರಗೆ ಪೌರ ಕಾರ್ಮಿಕ ಮಹಿಳೆಯ ಬೇಡಿಕೆಯನ್ನು ಆಲಿಸಿ ಅವರೊಂದಿಗೆ ಸಿಎಂ ಫೋಟೋ ತೆಗೆಸಿಕೊಂಡರು. ಈ ಸಂದರ್ಭದಲ್ಲಿ ಅವರೊಂದಿಗೆ ಸಂಪುಟದ ಇತರ ಸಚಿವರು ಜೊತೆಗಿದ್ದರು.
ಇಂದು ಬೆಂಗಳೂರಿನ ಆರ್ ಟಿ ನಗರ ನಿವಾಸದ ಬಳಿ ಇರುವ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪೌರ ಕಾರ್ಮಿಕರ ಜೊತೆ ಮಾತನಾಡಿ ಅವರ ಕುಶಲ ವಿಚಾರಿಸಿದರು.#ಜನಸಾಮಾನ್ಯರಬಜೆಟ್ pic.twitter.com/Uc2k0WfF6E
— Basavaraj S Bommai (@BSBommai) March 4, 2022
ರಾಜ್ಯದ ಮುಖ್ಯಮಂತ್ರಿಯಾಗಿ ಚೊಚ್ಚಲ ಬಜೆಟ್ ಇಂದು ಮಂಡಿಸಲಿದ್ದು, ಇದರ ಪ್ರಯುಕ್ತ ಬೆಂಗಳೂರಿನ ಶ್ರೀಕಂಠೇಶ್ವರ ದೇವಸ್ಥಾನ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಇಂದು ವಿಶೇಷ ಪೂಜೆ ಸಲ್ಲಿಸಿ, ಸಮಸ್ತ ಕರ್ನಾಟಕದ ಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಲಾಯಿತು.#ಜನಸಾಮಾನ್ಯರಬಜೆಟ್ pic.twitter.com/Wy9Z33hpLo
— Basavaraj S Bommai (@BSBommai) March 4, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.