ನವದೆಹಲಿ: ರಷ್ಯಾದಿಂದ ದಾಳಿ ಎದುರಿಸುತ್ತಿರುವ ಉಕ್ರೇನ್ ದೇಶದಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ನಡೆಯುತ್ತಿರುವ ಪ್ರಯತ್ನಗಳ ನಡುವೆ ಉಕ್ರೇನ್ ಬಿಕ್ಕಟ್ಟು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮತ್ತೊಂದು ಸುತ್ತಿನ ಸಭೆ ನಡೆಸಿದ್ದಾರೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಉನ್ನತ ಅಧಿಕಾರಿಗಳ ಜೊತೆಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಇನ್ನೊಬ್ಬ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಭೆಯಲ್ಲಿ ಭಾಗವಹಿಸಿದ್ದರು.
ಸರ್ಕಾರವು ತನ್ನ ನಾಗರಿಕರನ್ನು ಸ್ಥಳಾಂತರಿಸಲು “ಆಪರೇಷನ್ ಗಂಗಾ” ಅನ್ನು ಪ್ರಾರಂಭಿಸಿದೆ ಮತ್ತು ಕಾರ್ಯಾಚರಣೆಯನ್ನು ಸಂಘಟಿಸಲು ಉಕ್ರೇನ್ನ ನೆರೆಯ ರಾಷ್ಟ್ರಗಳಿಗೆ ವಿಶೇಷ ಪ್ರತಿನಿಧಿಗಳಾಗಿ ನಾಲ್ಕು ಕೇಂದ್ರ ಸಚಿವರನ್ನು ಕಳುಹಿಸಿದೆ.
ಈ ನಡುವೆ, ಆಪರೇಷನ್ ಗಂಗಾ ಅಡಿಯಲ್ಲಿ ರೊಮೇನಿಯಾ ಮತ್ತು ಹಂಗೇರಿಯಲ್ಲಿನ ವಾಯುನೆಲೆಗಳನ್ನು ಬಳಸಿಕೊಂಡು ಉಕ್ರೇನ್ನಿಂದ ಭಾರತೀಯರನ್ನು ಕರೆ ತರಲಾಗುತ್ತಿದೆ.
ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವೆ ಮೀನಾಕ್ಷಿ ಲೇಖಿ ಪ್ರಕಾರ, 9,000 ಕ್ಕೂ ಹೆಚ್ಚು ನಾಗರಿಕರನ್ನು ಉಕ್ರೇನ್ನಿಂದ ಭಾರತಕ್ಕೆ ಕರೆತರಲಾಗಿದೆ.
#WATCH | Delhi: Prime Minister Narendra Modi chairs a meeting to review the Ukraine-related situation.#RussiaUkraineCrisis pic.twitter.com/jAbLsRLBoR
— ANI (@ANI) March 4, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.