News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶಿರ್ವ-ಕಟಪಾಡಿ- ಮಲ್ಪೆ ಟೂರಿಸ್ಟ್ ಕಾರಿಡಾರ್ ರಚನೆಗೆ ಪ್ರಸ್ತಾವನೆ

Udupi Newsಮಂಗಳೂರು : ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಿರ್ವ-ಕಟಪಾಡಿ- ಮಲ್ಪೆ ನಡುವೆ ಟೂರಿಸ್ಟ್ ಕಾರಿಡಾರ್ ರಚನೆಗೆ ಪ್ರವಾಸೋದ್ಯಮ ಇಲಾಖೆ ಮೂಲಕ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಅವರು ಸುಮಾರು ೧.೫೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಟಪಾಡಿ ಗ್ರಾಮ ಪಂಚಾಯತ್‌ನ ನೂತನ ಕಟ್ಟಡ, ಅಬ್ಬಕ್ಕ ಹೆಗ್ಗಡ್ತಿ ವಾಣಿಜ್ಯ ಸಂಕೀರ್ಣ ಹಾಗೂ ಸುಮಾರು ೫ ಕೋಟಿ ರೂ ವೆಚ್ಚದ ಕಾಮಗಾರಿಗಳನ್ನು ಎ.೦೪ (ಶನಿವಾರ)ರಂದು ಉದ್ಘಾಟಿಸಿ ಮಾತನಾಡಿದರು.

ಟೂರಿಸ್ಟ್ ಕಾರಿಡಾರ್ ರಚನೆಗೆ ಸಂಬಂಧಿಸಿ ಈ ಭಾಗದಿಂದ ವಿದೇಶಕ್ಕೆ ತೆರಳಿ. ಅಲ್ಲಿ ಜೀವನ ನಡೆಸುತ್ತಿರುವ ಎನ್.ಆರ್.ಐ.ಗಳು ಮತ್ತು ಉದ್ಯಮಿಗಳನ್ನು ಸಂಪರ್ಕಿಸಲಾಗಿದೆ. ಅವರೊಂದಿಗೆ ಮಾತುಕತೆ ನಡೆಸಿ ಕರಾವಳಿ ಟೂರಿಸಂ ಅಭಿವೃದ್ಧಿ ಪಡಿಸುವ ಸರಕಾರದ ಯೋಜನೆಗೆ ಸಹಕಾರ ನೀಡುವಂತೆ ಮನವಿ ಮಾಡಲಾಗುತ್ತಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಜಿ.ಪಂ ಸದಸ್ಯ ಕಟಪಾಡಿ ಶಂಕರ ಪೂಜಾರಿ, ತಾ.ಪಂ ಅಧ್ಯಕ್ಷೆ ಸುನೀತಾ ನಾಯ್ಕ, ಉಪಾಧ್ಯಕ್ಷ ಗಣೇಶ್ ಕುಮಾರ್, ತಾ.ಪಂ ಸದಸ್ಯರಾದ ಶ್ರೀಕರ ಅಂಚನ್, ಗಿರೀಶ್ ಕುಮಾರ್ ಉದ್ಯಾವರ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಎಂಎಸ್.ಕೃಷ್ಣಾನಂದ, ತಹಶೀಲ್ದಾರ್ ಗುರುಪ್ರಸಾದ್, ಕಟಪಾಡಿ ಗ್ರಾ.ಪಂ ಅಧ್ಯಕ್ಷ ವಿನಯ ಬಲ್ಲಾಳ್, ಉಪಾಧ್ಯಕ್ಷೆ ಪ್ರಭಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top