ನವದೆಹಲಿ: ಆಪರೇಷನ್ ಗಂಗಾ ಶರವೇಗದಲ್ಲಿ ಮುಂದುವರೆಯುತ್ತಿದ್ದು, ಇದುವರೆಗೆ 11,000 ಕ್ಕೂ ಹೆಚ್ಚು ಭಾರತೀಯ ಪ್ರಜೆಗಳನ್ನು ಯುದ್ಧ ಪೀಡಿತ ಉಕ್ರೇನ್ನಿಂದ ಸ್ಥಳಾಂತರಿಸಲಾಗಿದೆ.
ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್ ಅವರು, ಆಪರೇಷನ್ ಗಂಗಾಗೆ ನಿರಂತರ ಬೆಂಬಲ ನೀಡುತ್ತಿರುವ ಭಾರತೀಯ ಮಿಷನ್ಗಳು, ವಿದೇಶಿ ಸರ್ಕಾರಗಳು ಮತ್ತು ಸ್ವಯಂಸೇವಕರಿಗೆ ಧನ್ಯವಾದ ತಿಳಿಸಿದ್ದಾರೆ.
ಇದುವರೆಗೆ 20 ಸಾವಿರಕ್ಕೂ ಹೆಚ್ಚು ಭಾರತೀಯರು ಉಕ್ರೇನ್ನ ಗಡಿಯನ್ನು ತೊರೆದಿದ್ದಾರೆ. ಕಳೆದ 24 ಗಂಟೆಗಳಲ್ಲಿ ಸುಮಾರು ನಾಲ್ಕು ಸಾವಿರ ಭಾರತೀಯರನ್ನು ಹೊತ್ತು 18 ವಿಮಾನಗಳು ಭಾರತಕ್ಕೆ ಬಂದಿಳಿದಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ ಶುಕ್ರವಾರ ಹೇಳಿದ್ದಾರೆ.
ಉಕ್ರೇನ್ನ ನೆರೆಯ ದೇಶಗಳಿಂದ ಇದುವರೆಗೆ ಒಟ್ಟು 48 ವಿಮಾನಗಳು ಬಂದಿಳಿದಿವೆ ಎಂದು ಅವರು ಹೇಳಿದ್ದು. ನಾಲ್ಕು ಐಎಎಫ್ನ ಸಿ-17 ವಿಮಾನಗಳು ಸೇರಿದಂತೆ ಮುಂದಿನ 24 ಗಂಟೆಗಳ ಕಾಲ 16 ವಿಮಾನಗಳನ್ನು ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಉಕ್ರೇನ್ನಿಂದ ಪ್ರತಿಯೊಬ್ಬ ಭಾರತೀಯನನ್ನು ಸ್ಥಳಾಂತರಿಸುವವರೆಗೆ ವಿಮಾನಗಳು ಕಾರ್ಯನಿರ್ವಹಿಸುತ್ತವೆ ಎಂದು ಭರವಸೆ ನೀಡಿದ ಅವರು, ವಿಶೇಷ ವಿಮಾನಗಳ ಕಾರ್ಯಾಚರಣೆಯೊಂದಿಗೆ ಉಕ್ರೇನ್ನ ಗಡಿ ದಾಟಿದ ಬಹುಪಾಲು ಭಾರತೀಯರು ಭಾರತಕ್ಕೆ ಮರಳುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸ್ಥಳಾಂತರಿಸುವ ಕಾರ್ಯಾಚರಣೆಯ ಕುರಿತು ಮಾತನಾಡಿದ ಅವರು, ಉಕ್ರೇನ್ನ ಪೂರ್ವ ಭಾಗದಲ್ಲಿ ವಿಶೇಷವಾಗಿ ಖಾರ್ಕಿವ್ ಮತ್ತು ಪಿಸೊಚಿನ್ನಲ್ಲಿ ಹೆಚ್ಚಿನ ಗಮನವನ್ನು ನೀಡಲಾಗಿದೆ. ಉಕ್ರೇನ್ನಲ್ಲಿರುವ ಭಾರತೀಯ ಮಿಷನ್ ಅಲ್ಲಿಗೆ ಕೆಲವು ಬಸ್ಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿದೆ. ಖಾರ್ಕಿವ್ನಲ್ಲಿ ಸುಮಾರು 300 ಭಾರತೀಯರು, ಪಿಸೋಚಿನ್ನಲ್ಲಿ 900 ಮತ್ತು ಸುಮಿಯಲ್ಲಿ 700 ಕ್ಕೂ ಹೆಚ್ಚು ಭಾರತೀಯರು ಸಿಕ್ಕಿಬಿದ್ದಿದ್ದಾರೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.