ನವದೆಹಲಿ: ಕೇಂದ್ರ ಸರ್ಕಾರವು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಕಡೇ ದಿನಾಂಕವನ್ನು 1 ವಾರ ವಿಸ್ತರಿಸಿದ್ದು, ಆ.31ರಿಂದ ಸೆ.7ರ ವರೆಗೆ ಮುಂದೂಡಿದೆ.
ಮೀಸಲಾತಿಗಾಗಿ ಆಗ್ರಹಿಸಿ ಗುಜರಾತ್ ರಾಜ್ಯದಲ್ಲಿ ಪಟೇಲ್ ಸಮುದಾಯ ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದರಿಂದ ಆದಾಯ ತೆರಿಗೆ ರಿಟರ್ನ್ಸ್ ಪಾವತಿಸಲು ಕಡೇ ದಿನಾಂಕವನ್ನು ವಿಸ್ತರಿಸಲಾಗಿದೆ.
ದೇಶದಲ್ಲಿ ಸುಮಾರು 4 ಕೋಟಿ ತೆರಿಗೆ ಪಾವತಿದಾರರಿದ್ದು, 2015-16ನೇ ಸಾಲಿಗೆ ಆದಾಯ ತೆರಿಗೆ ರಿಟರ್ನ್ಸ್ ವಿಧಾನವನ್ನು ಸರಳಗೊಳಿಸಲಾಗಿದೆ. ಸರ್ಕಾರ ಪ್ರಸಕ್ತ ವಿತ್ತೀಯ ವರ್ಷದಲ್ಲಿ 7.98 ಲಕ್ಷ ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.